ಸಿದ್ದರಾಮೋತ್ಸವ ಶಕ್ತಿ ಪ್ರದರ್ಶನವಲ್ಲ, ಅಮೃತೋತ್ಸವ: ದಾವಣಗೆರಿಯಲ್ಲಿ ರಾರಾಜಿಸುತ್ತಿವೆ ಸಿದ್ದು ಕಟೌಟ್‌ಗಳು!

ದಾವಣಗೆರಿಯಲ್ಲಿ ನಡೆಯುವುದು ಸಿದ್ದರಾಮೋತ್ಸವ ಅಲ್ಲ. ನನಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸ್ನೇಹಿತರು, ಹಿತೈಷಿಗಳು ಸೇರಿ ಅಮೃತೋತ್ಸವ ಆಚರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು, ಜೀವನದಲ್ಲಿ ಇದೊಂದು ಮಹತ್ತರ ಮೈಲಿಗಲ್ಲು. ಶಕ್ತಿ…

Siddharamaiah-Amrita-mahotsava-vijayaprabha-news

ದಾವಣಗೆರಿಯಲ್ಲಿ ನಡೆಯುವುದು ಸಿದ್ದರಾಮೋತ್ಸವ ಅಲ್ಲ. ನನಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸ್ನೇಹಿತರು, ಹಿತೈಷಿಗಳು ಸೇರಿ ಅಮೃತೋತ್ಸವ ಆಚರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು, ಜೀವನದಲ್ಲಿ ಇದೊಂದು ಮಹತ್ತರ ಮೈಲಿಗಲ್ಲು. ಶಕ್ತಿ ಪ್ರದರ್ಶನ, ಮುಖ್ಯಮಂತ್ರಿಯಾಗಲು ಹೀಗೆ ಮಾಡುತ್ತಿದ್ದಾರೆ ಎನ್ನುವುದೆಲ್ಲ ಮಾಧ್ಯಮ ಸೃಷ್ಟಿಯಾಗಿದೆ. ನಮ್ಮಲ್ಲಿ ಯಾವ ಬಣವೂ ಇಲ್ಲ, ಇರುವುದೊಂದೇ ಬಣ್ಣ, ಅದು ಸೋನಿಯಾ ಗಾಂಧಿ ಬಣ ಎಂದು ಸಿದ್ದರಾಮಯ್ಯ ಮಾಧ್ಯಮದವರಿಗೆ ಹೇಳಿದರು.

ಸಿದ್ದರಾಮೋತ್ಸವ-@75; ರಾರಾಜಿಸುತ್ತಿವೆ ಕಟೌಟ್‌ಗಳು..!

Vijayaprabha Mobile App free

ಇನ್ನು, ಮಾಜಿ ಸಿಎಂ ಹಾಗೂ ಹಾಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ನಿಮಿತ್ಯ ಕಾಂಗ್ರೆಸ್‌ ಪಕ್ಷದ ಅಭಿಮಾನಿಗಳು ಹಮ್ಮಿಕೊಂಡಿದ್ದ ‘ಸಿದ್ದರಾಮೋತ್ಸವ@75’ ಕಾರ್ಯಕ್ರಮವು ಅದ್ದೂರಿಯಾಗಿ ಆಯೋಜನೆ ಮಾಡಲಾಗಿದ್ದು, ಇಂದು ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ಇನ್ನು, ದಾವಣಗೆರೆ ನಗರದ ತುಂಬೆಲ್ಲ ಸಿದ್ದರಾಮಯ್ಯನವರ ಕಟೌಟ್‌ಗಳೇ ನಿಂತಿದ್ದು, ಕಾರ್ಯಕ್ರಮದ ಸ್ಥಳದಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಿದ್ದು, ರಾಹುಲ್ ಗಾಂಧಿ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಂದ ಅಭಿಮಾನಿಗಳು ಬರುತ್ತಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.