ಬೆಂಗಳೂರು: ರಾಜ್ಯಾದ್ಯಂತ ಜೂನ್ 14ರ ನಂತರವೂ ಈ ಹಿಂದಿನಂತೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯಾದ್ಯಂತ ಸಂಜೆ 7ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಹಾಗೂ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಗ್ರಾ. ಸೇರಿ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಜೂನ್ 21ರವರೆಗೆ ಮುಂದುವರೆಯಲಿದೆ.
ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ: ಏನಿರುತ್ತೆ? ಏನಿರಲ್ಲ?
ರಾಜ್ಯದಲ್ಲಿ ಸೋಂಕು ಇಳಿಕೆ ಆಗುತ್ತಿರುವ ಕಾರಣ ಜೂನ್ 14ರಿಂದ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದ್ದು, ಈ ವೇಳೆಯಲ್ಲಿ ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶವಿದ್ದು, ಆದರೆ BMTC, KSRTC ಸಂಚಾರವಿರುವುದಿಲ್ಲ. ಜೊತೆಗೆ ಆಟೋ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಇನ್ನು, ಮಧ್ಯಾಹ್ನ 2 ಗಂಟೆವರೆಗೆ ದಿನಸಿ ಅಂಗಡಿಗಳು, ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮತ್ತು ರಾತ್ರಿ 7 ಗಂಟೆಯಿಂದ ಬೆ.5 ಗಂಟೆವರೆಗೂ ನೈಟ್ ಕರ್ಫ್ಯೂ ಇರಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.