ಬಜೆಟ್ನಲ್ಲಿ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಜಾರಿಗೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದು, ಉನ್ನತ ಶಿಕ್ಷಣಕ್ಕೆ ಸರ್ಕಾರಿ ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುವುದು. 47 ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್ ಮಾಡಲಾಗುವುದು. ಸರ್ಕಾರಿ ಕೋಟಾದಡಿ ಆಯ್ಕೆ ಆದವರಿಗೆ ಸರ್ಕಾರ ನೆರವು ನೀಡಲಿದೆ.
ಇನ್ನು, ಉನ್ನತ ವ್ಯಾಸಂಗ ಮಾಡುವವರಿಗೆ 20 ಲಕ್ಷ ಸಾಲ, 300 ಪದವೀಧರರಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಿದ್ಯಾವರ್ಧಿನಿ ಯೋಜನೆ ಜಾರಿ..
ವಿದ್ಯಾವರ್ಧಿನಿ ಯೋಜನೆಯಡಿ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್ಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳು ಹಾಗೂ ಶೈಕ್ಷಣಿಕ ಒದಗಿಸಲಾಗುವುದು.
ವಿದ್ಯಾರ್ಥಿನಿಯರ ದೈಹಿಕ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿ
ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿಗೆ ಹೊಸ ಯೋಜನೆ




