Heavy rain: ಇಂದು ಮಧ್ಯಾಹ್ನದ ಹೊತ್ತಿಗೆ ಬೆಂಗಳೂರಿನಲ್ಲಿ ಮಳೆ ಅಬ್ಬರಿಸಿದ್ದು, ದಿಢೀರ್ ಶುರುವಾದ ಗುಡುಗು ಸಹಿತ ಭಾರೀ ಮಳೆಯಿಂದಾಗಿ (Heavy rain) ಜನಜೀವನ ಅಸ್ತವ್ಯಸ್ತಗೊಂಡಿತು.
ಹೌದು, ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಿಂದಾಗಿ ಬೈಕ್ ಸವಾರರು, ಸಾರ್ವಜನಿಕರು ಪರದಾಡಿದರು. ಮೆಜೆಸ್ಟಿಕ್, ಚಿಕ್ಕಪೇಟೆ, ಉಪ್ಪಾರಪೇಟೆ, ಶಿವಾಜಿನಗರ, ಮಲ್ಲೇಶ್ವರ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್ ಸೇರಿದಂತೆ ಪ್ಯಾಲೇಸ್ ರಸ್ತೆಯಲ್ಲಿ ಧಾರಾಕಾರ ಮಳೆಯಾಯಿತು. ಹವಾಮಾನ ಇಲಾಖೆ (Meteorological Department) ಪ್ರಕಾರ ಇನ್ನೆರಡು ದಿನ ಬೆಂಗಳೂರಿನಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಸಿಎಂ ಪರ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್!




