ಹುಲಿಯ ಮುಂದೆ ಇಲಿಯಂತೆ ನಿಂತವರು ಯಾರು?!; ಜಾಲತಾಣದಲ್ಲಿ ಭಾರಿ ಟ್ರೋಲ್ ಆಗುತ್ತಿದೆ ಈ ಫೋಟೋ!

ಮಂಡ್ಯ: ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎನ್ನುವ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಈ ನಡುವೆಯೇ ಸಂಸದೆ ಸುಮಲತಾ ಅವರು…

ಮಂಡ್ಯ: ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎನ್ನುವ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ತಾರಕಕ್ಕೇರಿದೆ.

ಈ ನಡುವೆಯೇ ಸಂಸದೆ ಸುಮಲತಾ ಅವರು ಮಾತಿನ ಮಧ್ಯೆ ನಟ, ರಾಜಕಾರಣಿ ದಿವಂಗತ ಅಂಬರೀಶ್ ಮುಂದೆ ಯಾರೆಲ್ಲಾ ಕೈ ಕಟ್ಟಿ ನಿಲ್ತಿದ್ರು ಎಂದು ತಮಗೆ ಗೊತ್ತಿದೆ. ನಟ ಅಂಬರೀಶ್ ಮುಂದೆ ಕೈಕಟ್ಟಿ ನಿಲ್ಲುತ್ತಿದ್ದವರೆಲ್ಲಾ ಈಗ ಮಾತನಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದರು.

ಈಗ, ಈ ಮಾತಿಗೆ ಪುಷ್ಟಿ ಎಂಬಂತೆ ಸಂಸದೆ ಸುಮಲತಾ ಬೆಂಬಲಿಗರು ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ನಟ ಅಂಬರೀಶ್ ಅವರ ಎದುರಿಗೆ ಎಚ್ ಡಿ ಕುಮಾರಸ್ವಾಮಿ ಅವರು ಕೈಕಟ್ಟಿ ನಿಂತುಕೊಂಡಿದ್ದು, ‘ಹುಲಿಯ ಮುಂದೆ ಇಲಿಯಂತೆ ನಿಂತವರು ಯಾರು’ ಎಂದು ಸಂಸದೆ ಸುಮಲತಾ ಬೆಂಬಲಿಗರು ಪ್ರಶ್ನಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.