ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅಧಿಕೃತವಾಗಿ ಅನುಮತಿಯಿಲ್ಲದೆ ವಿಡಿಯೋ, ಫೋಟೋ ತೆಗೆಯುವುದಕ್ಕೆ ನಿರ್ಬಂಧ ಹೇರಿರುವ ಆದೇಶವನ್ನು ತಡರಾತ್ರಿ ರಾಜ್ಯ ಸರ್ಕಾರ ಹಿಂಪಡೆದಿದೆ.
ನೌಕರರ ಮನವಿ ಮೇರೆಗೆ ಫೋಟೋ, ವಿಡಿಯೋ ಬ್ಯಾನ್ ಮಾಡಿ ಶುಕ್ರವಾರ ಆದೇಶ ಹೊರಡಿಸಲಾಗಿತ್ತು. ವಿಡಿಯೋ,
ಫೋಟೋ ಬ್ಯಾನ್ಗೆ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೆಡಿಎಸ್ ನ ಕಾಶೇಪ್ಪ ಬಂಡೆಪ್ಪನವರ, ಭ್ರಷ್ಟಾಚಾರ ವಿರೋಧಿ, ಹೋರಾಟಗಾರರು, ಕೆಆರ್ ಎಸ್ ಪಕ್ಷ, ಆಮ್ ಆದ್ಮಿ ಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.