ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಕ್ಕಳು ತರಗತಿಗಳಿಗೆ ಬರಲು ಸಾಧ್ಯವಾಗದ ಶಾಲೆಗಳಿಗೆ ಆಯಾ ಮುಖ್ಯೋಪಾಧ್ಯಾಯರೇ ರಜೆ ಘೋಷಿಸಬಹುದು’ ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಹೌದು, ಅಧಿಕಾರಿಗಳ ಸಹಮತ ಪಡೆದು ಆಯಾ ಶಾಲೆಯ ಮುಖ್ಯೋಪಾಧ್ಯಾಯರು ರಜೆ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಬಹುದು. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳು ಕುಸಿಯುವ ಸಾಧ್ಯತೆ ಇರುವುದರಿಂದ ಅಲ್ಲಿ ತರಗತಿಗಳನ್ನು ನಡೆಸಬಾರದು. ಮಕ್ಕಳ ಬಗ್ಗೆ ಜಾಗೃತಿ ಇರಲಿ’ ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



