ನಾಟಿ ಔಷಧಿಗೆ ಬಂದಿದ್ದ ಮಹಿಳೆಯ ಭೀಕರ ಹತ್ಯೆ: ಚಿನ್ನದ ಸರ ಕದ್ದು‌ ಪರಾರಿ..!

ಬೆಂಗಳೂರು: ನಾಟಿ ಔಷಧಿಗೆ ಬಂದಿದ್ದ ಮಹಿಳೆಯನ್ನು ಹತ್ಯೆ ಮಾಡಿ ಸರ ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಕಟ್ಟಿಗೇನಹಳ್ಳಿಯಲ್ಲಿ ನಡೆದಿದ್ದು, ಸಲೀಂ ಎಂಬಾತ ಚಿನ್ನದ ಸರಕ್ಕಾಗಿ ಸಿದ್ದಮ್ಮ ಎಂಬಾಕೆಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ. ಯಲಹಂಕ ಪೊಲೀಸ್…

Crime vijayaprabha news

ಬೆಂಗಳೂರು: ನಾಟಿ ಔಷಧಿಗೆ ಬಂದಿದ್ದ ಮಹಿಳೆಯನ್ನು ಹತ್ಯೆ ಮಾಡಿ ಸರ ಕಸಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಯಲಹಂಕದ ಕಟ್ಟಿಗೇನಹಳ್ಳಿಯಲ್ಲಿ ನಡೆದಿದ್ದು, ಸಲೀಂ ಎಂಬಾತ ಚಿನ್ನದ ಸರಕ್ಕಾಗಿ ಸಿದ್ದಮ್ಮ ಎಂಬಾಕೆಯನ್ನು ಹತ್ಯೆಗೈದು ಪರಾರಿಯಾಗಿದ್ದಾನೆ.

ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಿದ್ದಮ್ಮ ಆರೋಪಿ ಸಲೀಂ ಬಳಿ ನಾಟಿ ಔಷಧಿ ತೆಗೆದುಕೊಳ್ಳುತ್ತಿದ್ದರು ಎನ್ನಲಾಗಿದ್ದು, ನಿನ್ನೆ ಔಷಧಿ ತೆಗೆದುಕೊಳ್ಳಲು ಹೋಗಿದ್ದ ವೇಳೆ ಸಲೀಂ ಕೊಲೆ ಮಾಡಿ ಚಿನ್ನದ ಸರ ಕದ್ದು‌ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಯಲಹಂಕ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಬಿಹಾರ ಮೂಲದವನಾದ ಸಲೀಂ, ಕಳೆದ 20 ವರ್ಷದಿಂದ ಯಲಹಂಕದ ಕಟ್ಟಿಗೇನಹಳ್ಳಿಯಲ್ಲಿ ವಾಸವಿದ್ದ. ಊರಲ್ಲಿ ಗಾರೆ ಕೆಲಸ ಮಾಡಿಕೊಂಡು ಶುಗರ್ ಖಾಯಿಲೆಗೆ ನಾಟಿ ಔಷಧಿ ಕೊಡುತ್ತಿದ್ದ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.