ರಾಜ್ಯ ಸರ್ಕಾರದ ಹೊಸ ಆದೇಶ; ಪಂಚಾಯತಿ ಮಟ್ಟದಲ್ಲೇ ಜನನ, ಮರಣ ನೊಂದಣಿ

ಬೆಂಗಳೂರು: ಪಂಚಾಯತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹಾಗಾಗಿ ಇನ್ಮೇಲೆ ಜನನ ಮತ್ತು ಮರಣ ನೋಂದಣಿ ಹೊಣೆ ಪಿಡಿಒಗಳ…

karnataka vijayaprabha

ಬೆಂಗಳೂರು: ಪಂಚಾಯತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಹಾಗಾಗಿ ಇನ್ಮೇಲೆ ಜನನ ಮತ್ತು ಮರಣ ನೋಂದಣಿ ಹೊಣೆ ಪಿಡಿಒಗಳ ಮೇಲಿರಲಿದ್ದು, ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಲಾಗಿದೆ. ಜನನ ಮತ್ತು ಮರಣಗಳ ತ್ವರಿತ ನೋಂದಣಿ ಮತ್ತು ವರದಿ ಮಾಡುವುದು, ಜನರ ಎಲ್ಲಾ ದತ್ತಾಂಶ ಲಭ್ಯವಾಗುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿ ಕಡ್ಡಾಯ ಕಾರ್ಯ.

ಈ ಹಿನ್ನೆಲೆ ಜನನ ಮತ್ತು ಮರಣಗಳ ತ್ವರಿತ ನೋಂದಣಿ ಮತ್ತು ವರದಿ ಮಾಡುವ ಹೊಸ ಜವಾಬ್ದಾರಿಯನ್ನು ಪಿಡಿಒ ಮತ್ತು ಗ್ರಾಮ ಲೆಕ್ಕಿಗರಿಗೆ  ನೀಡಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.