ಬೆಣ್ಣೆನಗರಿಯಲ್ಲಿ ಬೆಳ್ಳಂಬೆಳಿಗ್ಗೆ ವರುಣನ ಎಂಟ್ರಿ: ಜನರ ಪರದಾಟ, ವ್ಯಾಪಾರಿಗಳಿಗೆ ಸಂಕಷ್ಟ…!

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಬೆಳ್ಳಬೆಳಗ್ಗೆ ಸುಮಾರು ಒಂದೂವರೆ ಗಂಟೆ ಕಾಲ ಮಳೆ‌ ಸುರಿದಿದ್ದು, ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಕೊರೊನಾ ಹಿನ್ನೆಲೆಯಲ್ಲಿ‌‌ ಲಾಕ್ ಡೌನ್ ಘೋಷಿಸಿದ್ದು, ಇಂದು ಬೆಳಿಗ್ಗೆ ಆರು ಗಂಟೆಯಿಂದ…

rain vijayaprabha news

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಬೆಳ್ಳಬೆಳಗ್ಗೆ ಸುಮಾರು ಒಂದೂವರೆ ಗಂಟೆ ಕಾಲ ಮಳೆ‌ ಸುರಿದಿದ್ದು, ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

ಕೊರೊನಾ ಹಿನ್ನೆಲೆಯಲ್ಲಿ‌‌ ಲಾಕ್ ಡೌನ್ ಘೋಷಿಸಿದ್ದು, ಇಂದು ಬೆಳಿಗ್ಗೆ ಆರು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ದಿನಸಿ, ಮದ್ಯ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ನೀಡಲಾಗಿತ್ತು. ಆದ್ರೆ ಆರು ಗಂಟೆಯಿಂದ ಸುರಿಯಲು ಆರಂಭಿಸಿದ ಮಳೆ ಎಂಟು ಗಂಟೆಯವರೆಗೆ ಸುರಿದಿದ್ದು, ಇದರಿಂದಾಗಿ ಜನರ ಓಡಾಟ ಕಡಿಮೆ ಆಗಿತ್ತು.

ಇನ್ನು ಅಂಗಡಿಗಳು ತೆರೆದಿದ್ದರೂ ಜನರು ಮನೆಯಿಂದ ಹೊರ ಬರಲಿಲ್ಲ. ಜೋರಾಗಿ ಮಳೆ ಬಂದ ಕಾರಣ ವಾಹನ ಸವಾರರು ಪರದಾಡುವಂತಾಗಿದ್ದು, ಇದರಿಂದ ತರಕಾರಿ ವ್ಯಾಪಾರಿಗಳು ಸಂಕಷ್ಟ ಎದುರಿಸಬೇಕಾಯಿತು. ಅಷ್ಟೇ ಅಲ್ಲದೆ ಮಾರುಕಟ್ಟೆಗೆ ಬೆಳ್ಳಂಬೆಳಿಗ್ಗೆ ಬಂದಿದ್ದ ವರ್ತಕರು, ವ್ಯಾಪಾರಿಗಳು ಹಾಗೂ ರೈತರು ಮಳೆಯಿಂದ ತಪ್ಪಿಸಿಕೊಳ್ಳಲು ಹರಸಾಹಸಪಟ್ಟರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.