ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ: ಸಚಿವ ಸುಧಾಕರ್

ಬೆಂಗಳೂರು: ಇಂದು ಅರೋಗ್ಯ ಸಚಿವ ಸುಧಾಕರ್ ಅವರ ನೇತೃತ್ವದಲ್ಲಿ, ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಲಸಿಕೆ ಅಭಿವೃದ್ಧಿಯ ಬಗ್ಗೆ ಮಾಹಿತಿ…

sudhakar health minister vijayaprabha news

ಬೆಂಗಳೂರು: ಇಂದು ಅರೋಗ್ಯ ಸಚಿವ ಸುಧಾಕರ್ ಅವರ ನೇತೃತ್ವದಲ್ಲಿ, ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಲಸಿಕೆ ಅಭಿವೃದ್ಧಿಯ ಬಗ್ಗೆ ಮಾಹಿತಿ ನೀಡಿದರು.

ಈ ಕುರಿತು ಅರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದೂ, ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಇಂದು ಲಸಿಕೆ ಅಭಿವೃದ್ಧಿಯ ಪ್ರಗತಿ, ಅದರ ಸಾಧಕ-ಬಾಧಕಗಳ ಕುರಿತು ಮಾಹಿತಿ ನೀಡಿದರು. 2021ರ ಆರಂಭದ ವೇಳೆಗೆ ಲಸಿಕೆ ಲಭ್ಯವಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ನಂತರ ವಯೋವೃದ್ಧರು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುವುದು.

Vijayaprabha Mobile App free

ಲಸಿಕೆ ಸಂಶೋಧನೆಯಲ್ಲಿ ತೊಡಗಿರುವ ಇತರೆ ಸಂಸ್ಥೆಗಳಾದ ಸೀರಮ್ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಸಂಸ್ಥೆಗಳ ಜೊತೆಗೂಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು. ಲಸಿಕೆ ಕಂಡುಹಿಡಿಯಲು ವಿಶ್ವದಾದ್ಯಂತ ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಲಸಿಕೆ ಎಂದು ಲಭ್ಯವಾಗುತ್ತದೆ ಎಂಬ ಪ್ರಶ್ನೆಗೆ ನಿಖರ ಉತ್ತರ ಯಾರ ಬಳಿಯೂ ಸದ್ಯಕ್ಕಿಲ್ಲ.

ರೋಟಾ ವೈರಸ್ ಗೆ ಲಸಿಕೆ ಸಿಗಲು 29 ವರ್ಷ ಬೇಕಾಯ್ತು. ಎಬೋಲಾ ವೈರಸ್ ಗೆ ಲಸಿಕೆ ಕಂಡುಹಿಡಿಯಲು 20 ವರ್ಷ ಕಾಯಬೇಕಾಯ್ತು. ಮಂಪ್ಸ್ ವೈರಸ್ ಗೆ 4 ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದೇ ಈವರೆಗೂ ನಮಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಸಿಕ್ಕ ಲಸಿಕೆ. ಈಗ ಕೊರೊನಾ ವೈರಸ್ ಗೆ 1 ವರ್ಷದೊಳಗೆ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದೇವೆ.

ಕೊರೊನಾ ವೈರಸ್ ವಿರುದ್ಧದ ಈ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ. ವಿಜ್ಞಾನಿಗಳ ಪ್ರಯತ್ನ ಆದಷ್ಟು ಬೇಗ ಫಲ ನೀಡಲಿ ಎಂದು ಆಶಿಸುತ್ತಾ ಲಸಿಕೆ ಸಿಗುವವರೆಗೂ ಮಾಸ್ಕ್ ಧರಿಸಿವುದು, ಪದೇ ಪದೇ ಕೈ ತೊಳೆಯುವುದು ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸೋಣ ಎಂದು ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.