ಪತ್ನಿಯ ಆ ಒಂದು ನಿರ್ಧಾರಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ

ತಿಪಟೂರು: ಮುಂದೆ ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆ ಮಾಡಿಕೊಂಡ ಪತ್ನಿಯ ನಿರ್ಧಾರಕ್ಕೆ ಬೇಸೆತ್ತು ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದ ಅಯ್ಯನಬಾವಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಹೌದು, ಅಯ್ಯನಬಾವಿಯ…

ತಿಪಟೂರು: ಮುಂದೆ ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆ ಮಾಡಿಕೊಂಡ ಪತ್ನಿಯ ನಿರ್ಧಾರಕ್ಕೆ ಬೇಸೆತ್ತು ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದ ಅಯ್ಯನಬಾವಿಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.

ಹೌದು, ಅಯ್ಯನಬಾವಿಯ ಎಸ್.ನಾಗರಾಜು (26) ಮೃತ ದುರ್ದೈವಿಯಾಗಿದ್ದು, ಅರಸೀಕೆರೆ ತಾಲೂಕು ಚಿಂದೇನಹಳ್ಳಿ ಗಡಿ ಸಮೀಪದ ಸೋಮೇನಹಳ್ಳಿಯ ಬೇಬಿಕಲಾ ಎಂಬಾಕೆ ಜತೆ ನಾಗರಾಜು ಕಳೆದ ವರ್ಷ ಮದುವೆ ಆಗಿದ್ದ. ಈ ದಂಪತಿಗೆ ಮೂರು ದಿನದ ಹಿಂದಷ್ಟೇ ಗಂಡು ಮಗು ಕೂಡ ಜನಿಸಿದ್ದು, ಆ ವೇಳೆ ಪತ್ನಿ ಬೇಬಿಕಲಾ ಮುಂದೆ ಮಕ್ಕಳಾಗದಂತೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಳು.

ಇನ್ನು, ಈ ವಿಚಾರ ತಿಳಿಯುತ್ತಿದಂತೆ ಕೋಪಗೊಂಡ ನಾಗರಾಜು, ನನ್ನನ್ನೂ ಕೇಳದೆ ಪತ್ನಿಗೆ ಶಸ್ತ್ರಚಿಕಿತ್ಸೆ ಮಾಡಿಸಿದ್ದನ್ನು ವಿರೋಧಿಸಿ ಪತ್ನಿಯ ಸಂಬಂಧಿಕರ ಜತೆ ಗಲಾಟೆ ಮಾಡಿದ್ದನು. ಈ ವೇಳೆ ನಾಗರಾಜು ವಿರುದ್ಧ ಪೊಲೀಸ್ ಠಾಣೆಗೆ ದೂರು ಕೊಡುವುದಾಗಿ ಪತ್ನಿ ಬೇಬಿಕಲಾಳ ಸಂಬಂಧಿಕರು ಬೆದರಿಸಿದ್ದರು.

Vijayaprabha Mobile App free

ಇದೇ ವಿಚಾರವಾಗಿ ಮನನೊಂದು ನಾಗರಾಜು ಸೋಮವಾರ ಬೆಳಗ್ಗೆ ನಗರದ ಅಯ್ಯನಬಾವಿ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.