ಪ್ರವೀಣ್‌ ನೆಟ್ಟಾರು ಹಂತಕರಿಗೆ ಮೂವರು ಮಹಿಳೆಯರ ನೆರವು; ಪ್ರವೀಣ್‌ ಕೊಲೆಗೆ ಕಾರಣವೇನು?

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಹೌದು, ಎಡಿಜಿಪಿ ಅಲೋಕ್‌ ಕುಮಾರ್‌ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮೂವರ ಬಂಧನ…

Praveen Nettaru vijayaprabha news

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಹೌದು, ಎಡಿಜಿಪಿ ಅಲೋಕ್‌ ಕುಮಾರ್‌ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮೂವರ ಬಂಧನ ಖಚಿತಪಡಿಸಿದ್ದು, ಮೊದಲ ಆರೋಪಿ ಸುಳ್ಯದ ಶಿಯಾಬ್‌, 2ನೇ ಆರೋಪಿ ಬಶೀರ್‌ ‍ಮತ್ತು 3ನೇ ಆರೋಪಿ ರಿಯಾಜ್‌ ಎಂದು ತಿಳಿಸಿದ್ದಾರೆ.

ಇನ್ನು, ಮೂವರು ಮಹಿಳೆಯರೂ ಹತ್ಯೆಗೆ ನೆರವಾಗಿದ್ದು, ಕಾಸರಗೋಡಿನ ಮಸೀದಿಯೊಂದರಲ್ಲಿ ಆರೋಪಿಗಳು ಆಶ್ರಯ ಪಡೆದಿದ್ದರು ಎಂದು ಮಾಹಿತಿ ನೀಡಿದ್ದಾರೆ.

Vijayaprabha Mobile App free

ಪ್ರವೀಣ್‌ ನೆಟ್ಟಾರು ಕೊಲೆಗೆ ಕಾರಣವೇನು?

ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆಗೆ ಹಲಾಲ್, ಜಟ್ಕಾ ಕಟ್ ಅಭಿಯಾನಯೇ ಪ್ರಮುಖ ಕಾರಣ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹೌದು, ಹಲಾಲ್ ವಿವಾದದ ಬಳಿಕ ಪ್ರವೀಣ್ ಕೋಳಿ ವ್ಯಾಪಾರದ ಅಂಗಡಿ ಆರಂಭ ಮಾಡಿದ್ದರು. ಇದಾದ ಬಳಿಕ 12 ಮಂದಿಯ ತಂಡ ಮೂವರ ಕೊಲೆಗೆ ಸ್ಕೆಚ್ ಹಾಕಿತ್ತು ಎನ್ನಲಾಗಿದೆ. ಹಲಾಲ್ ಅಭಿಯಾನಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಕೊಲೆಗೆ ಸಂಚು ರೂಪಿಸಿದ್ದ ಹಂತಕರಿಗೆ ಮಸೂದ್‌ ಹತ್ಯೆ ಒಂದು ನೆಪವಾಗಿತ್ತು.

ಹೀಗಾಗಿ, ಮೊದಲು ಪ್ರವೀಣ್‌ ಕೊಲೆಗೆ ನಿರ್ಧರಿಸಲಾಗಿತ್ತು ಎಂದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.