Weather Report | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ಭಾರಿ ಮಳೆಯಾಗಿತ್ತು. ಆದರೆ, ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದೆ.
ಹೌದು, ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: NAMO Drone Didi Scheme | ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತವಾಗಿ ₹8 ಲಕ್ಷ ..!
ಇನ್ನು, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Weather Report | ಹವಾಮಾನ ವೈಪರೀತ್ಯದ ಹಿನ್ನೆಲೆ, ನ. 9ರಿಂದ ಮತ್ತೆ ಮಳೆ!
ದಾನಾ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿ ಹಿಂಗಾರು ಮಳೆ ಆರಂಭವಾಗಲಿದ್ದು, ಬಂಗಾಳ ಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗುವ ಲಕ್ಷಣಗಳಿದ್ದು, ನ. 9ರಿಂದ ಮತ್ತೆ ಚುರುಕಾಗಲಿದೆ ಎನ್ನಲಾಗಿದೆ.