ಬೆಂಗಳೂರು: ಕೋವಿಡ್ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದು, ಸುದ್ದಿಗೋಷ್ಠಿಯ ಮುಖ್ಯಾಂಶಗಳು ಹೀಗಿವೆ…,
>ಈಜುಕೊಳ, ಕ್ರೀಡಾ ಸಂಕೀರ್ಣಗಳನ್ನು ಕ್ರೀಡಾಪಟುಗಳು ಅಭ್ಯಾಸಕ್ಕಾಗಿ ಬಳಸಿಕೊಳ್ಳಬಹುದು.
>ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರತಿಭಟನೆಗಳಿಗೆ ಅವಕಾಶ ಇರುವುದಿಲ್ಲ.
> ಮದುವೆಯಲ್ಲಿ 100 ಹಾಗು ಅಂತ್ಯ ಸಂಸ್ಕಾರದಲ್ಲಿ 20 ಜನ ಮಾತ್ರವೇ ಭಾಗವಹಿಸಬೇಕು.
>ಶಾಲೆ ತೆರೆಯುವ ಬಗ್ಗೆ ಪ್ರತ್ಯೇಕ ಸಭೆ ನಡೆಸಿ ತೀರ್ಮಾನಿಸಲಾಗುತ್ತದೆ. ಆನ್ ಲೈನ್ ತರಗತಿ ಯಥಾ ಪ್ರಕಾರ ಮುಂದುವರಿಯಲಿದೆ.
>ಬಾರ್, ಶಾಪಿಂಗ್ ಮಾಲ್ ತೆರೆಯಬಹುದು. ಚಿತ್ರ ಮಂದಿರಗಳು ಬಂದ್ ಇರಲಿವೆ.
>ಜನ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.
ಶೇ.100ರಷ್ಟು ಪ್ರಯಾಣಿಕರ ಸಂಚಾರಕ್ಕೆ ಅವಕಾಶ
ಸರ್ಕಾರಿ, ಖಾಸಗಿ ಕಚೇರಿ ಹಾಗೂ ಕೈಗಾರಿಕೆಗಳಲ್ಲಿ ಶೇ.100ರಷ್ಟು ಸಿಬ್ಬಂದಿ ಕಾರ್ಯ ನಿರ್ವಹಿಸಬಹುದು. ಮೆಟ್ರೋ ಸೇರಿ ಸರ್ಕಾರಿ ಸಾರಿಗೆಯಲ್ಲಿ ಶೇ.100ರಷ್ಟು ಪ್ರಯಾಣಿಕರು ಸಂಚರಿಸಬಹುದು.