ಬೆಂಗಳೂರು: ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ಇರುವ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುವುದು & 13 ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಬೆಳಿಗ್ಗೆ 6ರಿಂದ ಸಂಜೆ 5 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆಯವರೆಗೆ ವಾರಾಂತ್ಯದ ಕರ್ಫ್ಯೂ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಿಗೆ ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇನ್ನು ಶೇಕಡ 5 ಕ್ಕಿಂತ ಪಾಸಿಟಿವಿಟಿದ ದರ ಜಾಸ್ತಿ ಇರುವ ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಹಾಸನ, ಉಡುಪಿ, ದಕ್ಷಿಣ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಯಥಾಸ್ಥಿತಿ ನಿರ್ಬಂಧ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಸಡಿಲಿಕೆ ಮಾಡಲಾಗಿರುವ ಜಿಲ್ಲೆಗಳಲ್ಲಿ ಏನಿರುತ್ತೆ? ಇರಲ್ಲ?
* ಎಲ್ಲಾ ಅಂಗಡಿಗಳನ್ನು ಬೆಳಗ್ಗೆಯಿಂದ ಸಂಜೆ 5 ಗಂಟೆವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು, ಲಾಡ್ಜ್, ರೆಸಾರ್ಟ್ ಹಾಗು ಜಿಮ್ ಗಳಲ್ಲಿ ಎಸಿ ಇಲ್ಲದೇ ಶೇಕಡ 50 ಸಾಮರ್ಥ್ಯಕ್ಕೆ ಅವಕಾಶ ನೀಡಲಾಗಿದೆ.
* ಎಸಿ ಚಾಲನೆ ಇಲ್ಲದೇ ಹೋಟೆಲ್, ಕ್ಲಬ್, ರೆಸ್ಟೊರೆಂಟ್ ಓಪನ್ ಮಾಡಲು ಅನುಮತಿ ನೀಡಲಾಗಿದ್ದು, ಮದ್ಯಪಾನ ಹೊರತುಪಡಿಸಿ ಶೇಕಡ 50 ಸಾಮರ್ಥ್ಯದೊಂದಿಗೆ ಕುಳಿತು ತಿನ್ನಲು ಅವಕಾಶ ನೀಡಲಾಗಿದೆ.
* ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದ್ದು, ಬಸ್, ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
* ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆ, ಸರ್ಕಾರಿ, ಖಾಸಗಿ ಕಚೇರಿ ಶೇಕಡ 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಣೆಗೆ ಅನುಮತಿ ನೀಡಲಾಗಿದೆ
ಇನ್ನು, ಸಂಜೆ 7 ರಿಂದ ಬೆಳಗ್ಗೆ 5 ಗಂಎವರೆಗೆ ನೈಟ್ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಇರಲಿದ್ದು ಶುಕ್ರವಾರದಿಂದ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಯಾವುದಕ್ಕೆ ನಿರ್ಬಂಧ:
ಸಿನಿಮಾ ಮಂದಿರ, ಶಾಪಿಂಗ್ ಮಾಲ್, ಪಬ್, ಈಜುಕೊಳ, ಸಭೆ ಸಮಾರಂಭ, ರಾಜಕೀಯ ಸಭೆ, ಕ್ರೀಡೆ, ಶಿಕ್ಷಣ ಸಂಸ್ಥೆ, ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಬಂಧ ವಿಧಿಸಲಾಗಿದೆ.