Veteran Writer: ಹಿರಿಯ ಸಾಹಿತಿ ನಾ.ಡಿಸೋಜಾ ಇನ್ನಿಲ್ಲ

ಮಂಗಳೂರು: ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ನಾ.ಡಿಸೋಜ ಅವರು ಇಂದು ನಿಧನರಾದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು…

ಮಂಗಳೂರು: ಹಿರಿಯ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ನಾ.ಡಿಸೋಜ ಅವರು ಇಂದು ನಿಧನರಾದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಅವರ ಕುಟುಂಬಸ್ಥರು, ಕಳೆದ ಹಲವು ದಿನಗಳಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ನಾ.ಡಿಸೋಜಾ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದಿದ್ದು, ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಹುಟ್ಟೂರು ಸಾಗರಕ್ಕೆ ಕೊಂಡೊಯ್ಯುವುದಾಗಿ ತಿಳಿಸಿದ್ದಾರೆ.

ಸಾಗರ ಪಟ್ಟಣದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲಿ ಸಾಹಿತಿ ನಾ.ಡಿಸೋಜಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದೆ. ಈ ಕುರಿತು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಜ.7 ರಂದು ಮೃತರ ಅಂತ್ಯಕ್ರಿಯೆಯನ್ನು ಸಾಗರಲ್ಲಿಯೇ ನೆರವೇರಿಸುವುದಾಗಿ ಕುಟುಂಬಸ್ಥರು ತಿಳಿಸಿದರು. ಡಾ. ನಾ.ಡಿಸೋಜ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹಿರಿಯ ಸಾಹಿತಿ ಅಗಲಿಕೆಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.