ಬೆಂಗಳೂರು: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ರಾಜ್ಯ ಮುಖ್ಯಮಂತ್ರಿ ಬದಲಾವಣೆಯೋ -ಇವೆಲ್ಲ ನಿಮ್ಮ ಪಕ್ಷದ ಹಣೆಬರಹ.ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ತ್ವರಿತವಾಗಿ ಏನಾದರೂ ಕ್ರಮ ಕೈಗೊಂಡು, ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದೆಲ್ಲ ರಾಜ್ಯ ಬಿಜೆಪಿ ನಾಯಕರು, ‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು-ವಲಸೆಗಾರರು’ ‘ಕುಟುಂಬ ರಾಜಕಾರಣ’ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬೆತ್ತಲಾಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.
ಸಂಪುಟ ವಿಸ್ತರಣೆಯೋ, ಪುನಾರಚನೆಯೋ, @CMofKarnataka ಬದಲಾವಣೆಯೋ
-ಇವೆಲ್ಲ ನಿಮ್ಮ ಪಕ್ಷದ ಹಣೆಬರಹ.ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ.
ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು
ರಾಜ್ಯವನ್ನು ಉಳಿಸಿ.@BJP4Karnataka
1/2— Siddaramaiah (@siddaramaiah) November 20, 2020