ರಾಜ್ಯದಲ್ಲಿ ʻಯಶಸ್ವಿನಿʼ ಯೋಜನೆ ಮತ್ತೆ ಜಾರಿಯಾಗಲಿದೆ ಎಂದು ಪರಿಷತ್ನ ಪ್ರತಿಪಕ್ಷ ನಾಯಕರ ಪ್ರಶ್ನೆಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಉತ್ತರಿಸಿದ್ದಾರೆ.
ಹೌದು, ಪರಿಷತ್ನ ಪ್ರತಿಪಕ್ಷ ಸಚೇತಕ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್.ಟಿ.ಸೋಮಶೇಖರ್ ಅವರು, ‘ಕರ್ನಾಟಕದಾದ್ಯಂತ ಯಶಸ್ವಿನಿ ಮರು ಜಾರಿಗೆ ಬೇಡಿಕೆ ಇತ್ತು. ಇದಕ್ಕೆ ಆರೋಗ್ಯ, ಹಣಕಾಸು ಇಲಾಖೆಯ ಅನುಮತಿ ಸಿಕ್ಕಿದ್ದು, ಅ.2ರಿಂದ ಯೋಜನೆ ಜಾರಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲ, ಎಲ್ಲಾ ಆಯಾಮದಲ್ಲಿಯೂ ಪರಿಶೀಲಿಸಿ, ರಾಜ್ಯದಲ್ಲಿ ಮತ್ತೆ ʻಯಶಸ್ವಿನಿʼ ಯೋಜನೆ ಜಾರಿ ಮಾಡುತ್ತಿದ್ದು, ಆಯುಷ್ಮಾನ್ ಅರೋಗ್ಯ ಕರ್ನಾಟಕ ಯೋಜನೆ ಕೂಡ ಇರಲಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.