ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಅನ್ಯಸಮುದಾಯದ ಯುವಕನ ಮೇಲೆ ಹಲ್ಲೆ; ನಾಲ್ವರ ಬಂಧನ

ಬೆಳಗಾವಿ: ಯುವತಿಯೊಂದಿಗೆ ಮಾತನಾಡಿದ್ದಕ್ಕಾಗಿ ಆರು ಜನರ ಗುಂಪು ಅನ್ಯಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಬೆಳಗಾವಿ ಭಾಗದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ದೌರ್ಜನ್ಯದ ಘಟನೆಯೊಂದು ಬೆಳಕಿಗೆ ಬಂದಿವೆ. ಹಲ್ಲೆಗೊಳಗಾದ ಯುವಕನನ್ನು ಅಲ್ಲಾವುದ್ದೀನ್ ಪೀರ್ಜಾದೆ ಎಂದು…

ಬೆಳಗಾವಿ: ಯುವತಿಯೊಂದಿಗೆ ಮಾತನಾಡಿದ್ದಕ್ಕಾಗಿ ಆರು ಜನರ ಗುಂಪು ಅನ್ಯಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಬೆಳಗಾವಿ ಭಾಗದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ದೌರ್ಜನ್ಯದ ಘಟನೆಯೊಂದು ಬೆಳಕಿಗೆ ಬಂದಿವೆ. ಹಲ್ಲೆಗೊಳಗಾದ ಯುವಕನನ್ನು ಅಲ್ಲಾವುದ್ದೀನ್ ಪೀರ್ಜಾದೆ ಎಂದು ಗುರುತಿಸಲಾಗಿದೆ.

ಹುಡುಗಿಯೊಬ್ಬಳೊಂದಿಗೆ ಮಾತನಾಡಿದ್ದಕ್ಕಾಗಿ ಆತನನ್ನು ಪ್ರಶ್ನಿಸಿದ ಯುವತಿ ಸಮುದಾಯದ ಯುವಕರ ಗುಂಪು ಪೊಲೀಸ್ ದೂರು ಅಥವಾ ಬಾಲಕಿಯ ಪೋಷಕರಿಗೆ ದೂರು ನೀಡುವ ಬದಲಿಗೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ಪೊಲೀಸರ ಪ್ರಕಾರ, ಪೀರ್ಜಾದೆ ಹರಿದ ಬಟ್ಟೆಗಳನ್ನು ಧರಿಸಿ ಪೊಲೀಸ್ ಠಾಣೆಗೆ ಧಾವಿಸಿ ಹಲ್ಲೆ ನಡೆಸಿದ ಆರು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಎಫ್ಐಆರ್ ನಂತರ ತ್ವರಿತವಾಗಿ ಕ್ರಮ ಕೈಗೊಂಡ ಪೊಲೀಸರು, ಸೋಮವಾರ ತಡರಾತ್ರಿ ಆರು ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದರು.

Vijayaprabha Mobile App free

ಬಂಧಿತರನ್ನು ಸಾವಗಾಂವ್ ಮೂಲದ ಸಂತೋಷ್ ಜಾಧವ್, ಸುದೇಶ್ ಪಾಟೀಲ್ ಮತ್ತು ಅಂಗೋಲ್ ಪ್ರದೇಶದ ಸುಮಿತ್ ಮೋರೆ ಮತ್ತು ಜೈ ಇಂಚಲ್ ಎಂದು ಗುರುತಿಸಲಾಗಿದೆ.  ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.