ಹಂಪಿ ಸ್ಮಾರಕಗಳ ನಡುವೆ ಪುರಂದರದಾಸರ ಆರಾಧನೆ; ದಾಸವಾಣಿಯಿಂದ ಮನುಕುಲಕ್ಕೆ ಒಳಿತಾಗುವ ಅಂಶ: ಎಸಿ ಸಿದ್ಧರಾಮೇಶ್ವರ

ಹೊಸಪೇಟೆ (ವಿಜಯನಗರ): ಪುರಂದರದಾಸರು ರಚಿಸಿರುವ ಕೀರ್ತನೆಗಳಲ್ಲಿ ಮನುಕುಲಕ್ಕೆ ಒಳಿತಾಗುವ ಅಂಶಗಳೆ ತುಂಬಿಕೊಂಡಿವೆ ಎಂದು ಹೊಸಪೇಟೆ ಉಪವಿಭಾಗಾಧಿಕಾರಿ ಹಾಗೂ ಹಂಪಿ ವಿಶ್ವಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ಧರಾಮೇಶ್ವರ ಅವರು ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು…

Purandara Dasa among the Hampi monuments

ಹೊಸಪೇಟೆ (ವಿಜಯನಗರ): ಪುರಂದರದಾಸರು ರಚಿಸಿರುವ ಕೀರ್ತನೆಗಳಲ್ಲಿ ಮನುಕುಲಕ್ಕೆ ಒಳಿತಾಗುವ ಅಂಶಗಳೆ ತುಂಬಿಕೊಂಡಿವೆ ಎಂದು ಹೊಸಪೇಟೆ ಉಪವಿಭಾಗಾಧಿಕಾರಿ ಹಾಗೂ ಹಂಪಿ ವಿಶ್ವಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ಧರಾಮೇಶ್ವರ ಅವರು ತಿಳಿಸಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವಿಶ್ವವಿಖ್ಯಾತ ಹಂಪಿಯ ವಿಜಯವಿಠ್ಠಲ ದೇವಸ್ಥಾನದ ಬಳಿಯ ಬ್ರಹ್ಮವಿಠ್ಠಲ ಮಂಟಪದ ಆವರಣದಲ್ಲಿ ಶನಿವಾರ ಸಂಜೆ ಆಯೋಜಿಸಲಾಗಿದ್ದ ಶ್ರೀ ಪುರಂದರದಾಸರ ಆರಾಧನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕøತಿಕ ಕಾರ್ಯಕ್ರಮವನ್ನು ಸಿದ್ಧರಾಮೇಶ್ವರ ಅವರು ಶ್ರೀ ಪುರಂದರದಾಸರ ಭಾವಚಿತ್ರಕ್ಕೆ ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದರು.

Hampi monuments

Vijayaprabha Mobile App free

ಪುರಂದರದಾಸರು ಜೀವಿಸಿದ್ದ ಹಂಪಿಯಲ್ಲಿ ಎರಡು ದಿನಗಳ ಕಾಲ ವಿಶೇಷ ಪೂಜೆ, ಸಂಗೀತ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಿಂದ ಆರಾಧನೆ ಅರ್ಥಪೂರ್ಣವಾಗಿ ನಡೆದಿದೆ. ಸಂಗೀತಕ್ಕೆ ಚಿಕಿತ್ಸಕ ಗುಣವಿದೆ. ದಾಸರು ರಚಿಸಿದ ಕೀರ್ತನೆಗಳು ಅರ್ಥಗರ್ಭಿತವಾಗಿರುತ್ತವೆ. ದಾಸಸಾಹಿತ್ಯ ಪ್ರಸ್ತುತ ಕಾಲಘಟ್ಟಕ್ಕೂ ಅನ್ವಯವಾಗುವ ವಿಚಾರಗಳಿವೆ. ಕೀರ್ತನೆಗಳನ್ನು ದಾಸವಾಣಿಯಂತೆ ಅನುಸರಿಸಲು ನಾವು ಸಿದ್ಧರಾಗಬೇಕು ಎಂದರು.

ಆರಾಧನೋತ್ಸವ ಅಂಗವಾಗಿ ಪಂಡಿತ್ ನಾಗರಾಜ್ ಹವಾಲ್ದಾರ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಧಾ ರಂಗನಾಥ್ ಅವರಿಂದ ಕರ್ನಾಟಕ ಸಂಗೀತ ಗಾಯನ, ರೂಪಾಲಿಕಾ ತಂಡದಿಂದ ಸಮೂಹ ನೃತ್ಯ, ಅಮೃತ ತಂಡದಿಂದ ನೃತ್ಯ ರೂಪಕ, ಪಿ.ಭವ್ಯ ಅವರಿಂದ ಗಿರಿಜಾ ಕಲ್ಯಾಣ ನೃತ್ಯ ಹಾಗೂ ಇಂದ್ರಾಣಿ ತಂಡದಿಂದ ಸಮೂಹ ನೃತ್ಯ ಪ್ರದರ್ಶನ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಹೊಸಪೇಟೆ ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಆನೆಗುಂದಿ ರಾಜವಂಶಸ್ಥ ಶ್ರೀಕೃಷ್ಣದೇವರಾಯ, ರಾಜಮಾತೆ ಚಂದ್ರಕಾಂತಾ ದೇವಿ ಇದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.