ಉಚ್ಚಂಗಿದುರ್ಗ: ರಕ್ತ ಹಂಚಿಕೊಂಡವಳ ರಕ್ತ ಚಲ್ಲಿದ ಸೋದರ…!

ಉಚ್ಚಂಗಿದುರ್ಗ: ಅಣ್ಣನೇ ತನ್ನ ತಂಗಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಸಮೀಪದ ಬಳ್ಳಾರಿ ಜಿಲ್ಲೆ, ಹರಪನಹಳ್ಳಿ ತಾಲೂಕು, ಉಚ್ಚನಗಿದುರ್ಗದ ಹತ್ತಿರ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ತಂಗಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಡಿದುರ್ಗ…

Crime vijayaprabha news

ಉಚ್ಚಂಗಿದುರ್ಗ: ಅಣ್ಣನೇ ತನ್ನ ತಂಗಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಸಮೀಪದ ಬಳ್ಳಾರಿ ಜಿಲ್ಲೆ, ಹರಪನಹಳ್ಳಿ ತಾಲೂಕು, ಉಚ್ಚನಗಿದುರ್ಗದ ಹತ್ತಿರ ಕರಡಿದುರ್ಗ ಗ್ರಾಮದಲ್ಲಿ ನಡೆದಿದೆ. ತಂಗಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರಡಿದುರ್ಗ ಗ್ರಾಮದ ಹನುಮಂತ ಆರೋಪಿಯಾಗಿದ್ದು, ಆತನ ತಂಗಿ ರತ್ನಮ್ಮ (28) ಗಂಭೀರ ಗಾಯಗೊಂಡವರಾಗಿದ್ದಾರೆ. ಹನುಮಂತಪ್ಪ ಅವರ ತಂಗಿ ರತ್ನಮ್ಮಗೆ ಮದುವೆಯಾಗಿತ್ತು. ಐದು ವರ್ಷಗಳ ಹಿಂದೆ ಪತಿಯನ್ನು ಬಿಟ್ಟು ತವರು ಮನೆ ಸೇರಿದ್ದರು.

ರತ್ನಮ್ಮ ಈಚೆಗೆ ವ್ಯಕ್ತಿಯೊಬ್ಬರ ಜತೆಗೆ ಸಂಬಂಧ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು ಎಂದು ತಿಳಿದು ಮನೆಯಲ್ಲಿ ಜಗಳ ನಡೆಯುತ್ತಿತ್ತು. ಈ ಉದ್ದೇಶದಿಂದ ಜಗಳ ತಾರಕಕ್ಕೇರಿ ಹನುಮಂತಪ್ಪ ತನ್ನ ರತ್ನಮ್ಮ ಅವರನ್ನು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.

Vijayaprabha Mobile App free

ಆರೋಪಿ ಹನುಮಂತ ಪರಾರಿಯಾಗಿದ್ದು, ಅರಸೀಕೆರೆ ಪೊಲೀಸ್ ಗ್ರಾಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.