ಅಪರಿಚಿತ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು

ವಿಜಯಪುರ: ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರೂ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ದೇವರಹಿಪ್ಪರಗಿಯ ಬಸವನ ಬಾಗೇವಾಡಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಆರೀಪ್…

ವಿಜಯಪುರ: ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರೂ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ದೇವರಹಿಪ್ಪರಗಿಯ ಬಸವನ ಬಾಗೇವಾಡಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಆರೀಪ್ ವಡ್ಡೋಡಗಿ (35), ಮೈಬೂಬ್‌ಸಾಬ್ ಕರಜಗಿ (65) ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರರಾಗಿದ್ದಾರೆ. ಬೈಕ್ ಸವಾರರು ಹೂವಿನ ಹಿಪ್ಪರಗಿಯಿಂದ ದೇವರಹಿಪ್ಪರಗಿಗೆ ಬರುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸವನ ಬಾಗೇವಾಡಿ ಕಡೆಗೆ ಹೊರಟಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ.

ಬೈಕ್ ಡಿಕ್ಕಿ ಹೊಡೆದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧು, ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.