ಹರಪನಹಳ್ಳಿ : ಫೆಬ್ರವರಿ 20ರಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸುತ್ತೋಲೆಯನ್ವಯ ಹಾಗೂ ಘನ ಕರ್ನಾಟಕ ಸರ್ಕಾರದ ಆದೇಶದನ್ವಯ ಮದ್ಯಾಹ್ನ 3 ಗಂಟೆಗೆ ಹರಪನಹಳ್ಳಿ ಉಪ- ವಿಭಾಗ ಕಛೇರಿಯಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಗೆ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹಾಜರಾಗಿ ನಮ್ಮ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.