KSRTC ಬಸ್ಗೆ ಬೈಕ್ ಡಿಕ್ಕಿ: ಮೂವರು ಮಕ್ಕಳು ಸೇರಿದಂತೆ ಐವರು ಸಾವು

ರಾಯಚೂರು: ಯಾದಗಿರಿ ಜಿಲ್ಲೆಯ ಶೋರಾಪುರ ತಾಲ್ಲೂಕಿನ ತಿಂಥಾನಿ ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಕೆಎಸ್ಆರ್‌ಟಿಸಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು…

ರಾಯಚೂರು: ಯಾದಗಿರಿ ಜಿಲ್ಲೆಯ ಶೋರಾಪುರ ತಾಲ್ಲೂಕಿನ ತಿಂಥಾನಿ ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಕೆಎಸ್ಆರ್‌ಟಿಸಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಮೆಟ್ಟಮರಡಿದೊಡ್ಡಿ ಗ್ರಾಮದ ಆಂಜನೇಯ (35), ಗಂಗಮ್ಮ (28), ಹನಮಂತ (1.5), ಪವಿತ್ರಾ (5) ಮತ್ತು ರಾಯಪ್ಪ (3) ಎಂದು ಗುರುತಿಸಲಾಗಿದೆ.  ಪವಿತ್ರ ಮತ್ತು ರಾಯಪ್ಪ ಆಂಜನೇಯ ಅವರ ಸಹೋದರನ ಮಕ್ಕಳಾಗಿದ್ದರು.

ಮೂಲಗಳ ಪ್ರಕಾರ, ಕುಟುಂಬವು ಶಹಾಪುರ ತಾಲ್ಲೂಕಿನ ಹಲಿಸಾಗರ್ನಿಂದ ಗುಡಗುಂಟಿಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶೋರಾಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply