ಹೊಸಪೇಟೆ,ಫೆ.17: ‘ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ’ ಅಭಿಯಾನದಡಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ.19ರಂದು ಬೆಳಗ್ಗೆ 10.30ಕ್ಕೆ ಹರಪನಹಳ್ಳಿ ತಾಲೂಕಿನ ತೆಲಗಿ ಹೋಬಳಿಯ ವಟ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಈ ಗ್ರಾಮದಲ್ಲಿ ಸಾರ್ವಜನಿಕರ ದೂರು-ದುಮ್ಮಾನಗಳನ್ನು ಆಲಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಮ್ಮ ಪ್ರತಿನಿಧಿಗಳನ್ನು ನಿಯೋಜಿಸದೇ ತಮ್ಮ ಇಲಾಖೆಯ ಅಗತ್ಯ ಮಾಹಿತಿಗಳೊಂದಿಗೆ ಕಡ್ಡಾಯವಾಗಿ ತಾವೇ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.