ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲ್ಲೂಕಿನ ತಡೋಳ ಗ್ರಾಮದಲ್ಲಿ ನಡೆದಿದೆ. ಪೂಜಾ ಪ್ರವೀಣ(30) ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆಯಾಗಿದ್ದಾಳೆ.
ಬಸವಕಲ್ಯಾಣ ತಾಲ್ಲೂಕಿನ ಮೂಲದ ಪೂಜಾ ಕಳೆದ 4 ವರ್ಷದ ಹಿಂದೆ ತಡೋಳ ಗ್ರಾಮದ ಪ್ರವೀಣ್ ಎಂಬುವವರೊಂದಿಗೆ ವಿವಾಹವಾಗಿದ್ದಳು. ಗ್ರಾಮ ಪಂಚಾಯತ್ನ ಮಾಜಿ ಉಪಾಧ್ಯಕ್ಷನಾಗಿರುವ ಪ್ರವೀಣ್, ವರದಕ್ಷಿಣೆ ತರುವಂತೆ ಪೂಜಾಳನ್ನು ಪೀಡಿಸುತ್ತಿದ್ದ ಎನ್ನಲಾಗಿದ್ದು, ಈ ಹಿಂದೆಯೂ ಸಹ ಹಲವು ಬಾರಿ ಇದೇ ವಿಚಾರಕ್ಕೆ ಗಂಡ ಹೆಂಡತಿ ನಡುವೆ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು.
ಇದೀಗ ವರದಕ್ಷಿಣೆ ಆಸೆಗಾಗಿ ಗಂಡನೇ ಪೂಜಾಳನ್ನು ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಪೂಜಾ ಮೃತದೇಹವನ್ನು ತಾಲ್ಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು, ಪತಿ ಪ್ರವೀಣ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.