Timmakka Garden: ಪ್ರವಾಸಿಗರನ್ನು ಆಕರ್ಷಿಸಲು ಸಸ್ಯೋದ್ಯಾನದಲ್ಲಿ ಸಾಹಸ ಚಟುವಟಿಕೆ; ರವಿಶಂಕರ ಸಿ

ಕಾರವಾರ: ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಮಕ್ಕಳ ಆಟಿಕೆ ವ್ಯವಸ್ಥೆ ಹಾಗೂ ಜಿಪ್‌ಲೈನ್ ನಂತಹ ಸಾಹಸ ಚಟುವಟಿಕೆಗಳನ್ನು ಅಳವಡಿಸಲು ಚಿಂತನೆ ನಡೆಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ.ಸಿ. ತಿಳಿಸಿದರು. ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿ…

ಕಾರವಾರ: ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಮಕ್ಕಳ ಆಟಿಕೆ ವ್ಯವಸ್ಥೆ ಹಾಗೂ ಜಿಪ್‌ಲೈನ್ ನಂತಹ ಸಾಹಸ ಚಟುವಟಿಕೆಗಳನ್ನು ಅಳವಡಿಸಲು ಚಿಂತನೆ ನಡೆಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ.ಸಿ. ತಿಳಿಸಿದರು. ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಈ ಮೂಲಕ ಪ್ರವಾಸಿಗರನ್ನು ಹಾಗೂ ಮಕ್ಕಳನ್ನು ಸಸ್ಯೋದ್ಯಾನದತ್ತ ಸೆಳೆಯಲು ಪ್ರಯತ್ನಿಸಲಾಗುವುದು ಎಂದರು.

ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರಕ್ಕೆ ಹೊಂದಿಕೊಂಡಿರುವ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದ ನಿರ್ವಹಣೆಗೆ ಈ ಬಾರಿ ಹೆಚ್ಚುವರಿ ಅನುದಾನ ಲಭ್ಯವಾಗಿದೆ. ಹೀಗಾಗಿ ಪ್ರವಾಸಿಗರನ್ನು ಆಕರ್ಷಿಸಲು ಮಕ್ಕಳ ಆಟಿಕೆ ಸಾಮಾಗ್ರಿ, ಪರಿಸರ ಸ್ನೇಹಿ ಕುರ್ಚಿಗಳನ್ನು ಅಳವಡಿಸಲು ಪ್ರಸಕ್ತ ಸಾಲಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದರು. 

ಸಸ್ಯೋದ್ಯಾನದಲ್ಲಿ ಕೆ-ಶೋರ್ ಯೋಜನೆಯಡಿ ಸುಮಾರು 4.5 ಕೋಟಿ ವೆಚ್ಚದಲ್ಲಿ ಸಮುದ್ರ ಜೀವಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ(Marine Rescue and Rehabilitation Center) ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಕೇಂದ್ರದ ಸ್ಥಾಪನೆಯಿಂದ ಅಳಿವಿನಂಚಿನಲ್ಲಿರುವ ಜೀವಿಗಳ ಸಂರಕ್ಷಣೆ ಮತ್ತು ಅವುಗಳ ಅಧ್ಯಯನಕ್ಕೆ ಅನುಕೂಲವಾಗಲಿದ್ದು, ಇದಕ್ಕೆ ಸಮಿತಿ ಸದಸ್ಯರ ಸಲಹೆ, ಸಹಕಾರ ಅಗತ್ಯ ಎಂದರು.

Vijayaprabha Mobile App free

ಸಭೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಡಿ ನಾಯ್ಕ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ನಾಯ್ಕ, ಕರಾವಳಿ ಮತ್ತು ಸಮುದ್ರ ಪರಿಸರ ವ್ಯವಸ್ಥೆಯ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಿರಣ, ಸ್ನಾತಕೋತ್ತರ ಪದವಿ ಕೇಂದ್ರದ ಆಡಳಿತಾಧಿಕಾರಿ ಡಾ. ಶಿವಕುಮಾರ್ ಹರಗಿ, ಉಪ ವಿಜ್ಞಾನ ಕೇಂದ್ರದ ಅಧಿಕಾರಿಗಳು, ದಿವೇಕರ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.