ಬಾಗಲಕೋಟೆ: ರಾಜ್ಯ ಸರ್ಕಾರ ಮಹಿಳೆಯರ ಓಡಾಟಕ್ಕೆ ಅನುಕೂಲವಾಗಲೀ ಎನ್ನುವ ಉದ್ದೇಶದಿಂದ ಸರ್ಕಾರಿ ಬಸ್ಗಳಲ್ಲಿ ಉಚಿತ ಓಡಾಟಕ್ಕೆ ಸ್ತ್ರೀ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಕೆಲಸ ಕಾರ್ಯಗಳಿಗೆ ತೆರಳಲು ಸಾಕಷ್ಟು ಪ್ರಯೋಜನವಾಗುತ್ತಿದೆ. ಆದರೆ ಈ ಯೋಜನೆಯನ್ನು ಮಹಿಳೆಯರೇ ದುರ್ಬಳಕೆ ಮಾಡಿಕೊಂಡಿರುವ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪಟ್ಟಣದಲ್ಲಿ ವರದಿಯಾಗಿದೆ.
ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣದಲ್ಲಿ ಮೂವರು ಬುರ್ಖಾಧಾರಿ ಮಹಿಳೆಯರು ಒಂದೇ ಆಧಾರ್ಕಾರ್ಡ್ನ ಪ್ರತಿಗಳನ್ನು ತೋರಿಸಿ ಬೆಳಗಾವಿಗೆ ಟಿಕೆಟ್ ಪಡೆದುಕೊಂಡಿದ್ದಾರೆ. ಬಸ್ನಲ್ಲಿ ಟಿಕೆಟ್ ಚೆಕ್ಕಿಂಗ್ ಸಿಬ್ಬಂದಿ ಹತ್ತಿ ಪ್ರಯಾಣಿಕರ ಟಿಕೆಟ್ ಪರಿಶೀಲನೆಗೆ ಮುಂದಾದ ವೇಳೆ ಮಹಿಳೆಯರ ಆಧಾರಕಾರ್ಡ್ಗಳನ್ನು ಸಹ ಪರಿಶೀಲಿಸಿದ್ದಾರೆ. ಈ ವೇಳೆ ಮೂವರು ಮಹಿಳೆಯರು ಒಂದೇ ಆಧಾರಕಾರ್ಡ್ನ ಬೇರೆ ಬೇರೆ ಪ್ರತಿ ತೋರಿಸಿ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯರ ನಡೆಗೆ ಟಿಕೆಟ್ ಪರಿಶೀಲನೆಗೆ ಬಂದಿದ್ದ ಅಧಿಕಾರಿ ಆಕ್ರೋಶಗೊಂಡಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂವರು ಮಹಿಳೆಯರಿಗೆ ತಲಾ 500 ರೂಪಾಯಿ ದಂಡ ಕಟ್ಟುವಂತೆ ಅಧಿಕಾರಿಗಳು ಸೂಚನೆ ನೀಡಿದ್ದು, ಇಲ್ಲವಾದಲ್ಲಿ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಳಿಕ ಮಹಿಳೆಯರು ದಂಡ ಕಟ್ಟಿ ಕ್ಷಮೆಯಾಚಿಸಿದ್ದಾಗಿ ತಿಳಿದುಬಂದಿದೆ.