ಮಹಾಲಿಂಗೇಶ್ವರ ಸೇವಾ ಟ್ರಸ್ಟ್‌ನಿಂದ ವಿಜ್ರಂಭಣೆಯ ಮಹಾ ಶಿವರಾತ್ರಿ ಆಚರಣೆ: ತ್ರಿವೇಣಿ ಸಂಗಮದ ಪವಿತ್ರ ಜಲ ಪ್ರೋಕ್ಷಣೆ

ಬೆಂಗಳೂರು: ಮಹಾಲಿಂಗೇಶ್ವರ ಸೇವಾ ಟ್ರಸ್ಟ್‌ನಿಂದ ಶಿಶುಗೃಹ ಪೂರ್ಣಪ್ರಜ್ಞ ಆಟದ ಮೈದಾನದಲ್ಲಿ ವಿಜ್ರಂಭಣೆಯಿಂದ ಮಹಾಶಿವರಾತ್ರಿಯನ್ನು ಆಚರಿಸಲಾಯಿತು. ಬಂಗಾರದ ಗೋಪುರಗಳ ಮಾದರಿಯ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶಿವನ ಲಿಂಗಕ್ಕೆ ಪ್ರಾಣ ಪತ್ರಿಷ್ಠಾಪನೆ ನೆರವೇರಿಸಿ ವಿಶೇಷ ಪೂಜೆ, ಹೋಮ, ಹವನ,…

ಬೆಂಗಳೂರು: ಮಹಾಲಿಂಗೇಶ್ವರ ಸೇವಾ ಟ್ರಸ್ಟ್‌ನಿಂದ ಶಿಶುಗೃಹ ಪೂರ್ಣಪ್ರಜ್ಞ ಆಟದ ಮೈದಾನದಲ್ಲಿ ವಿಜ್ರಂಭಣೆಯಿಂದ ಮಹಾಶಿವರಾತ್ರಿಯನ್ನು ಆಚರಿಸಲಾಯಿತು. ಬಂಗಾರದ ಗೋಪುರಗಳ ಮಾದರಿಯ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶಿವನ ಲಿಂಗಕ್ಕೆ ಪ್ರಾಣ ಪತ್ರಿಷ್ಠಾಪನೆ ನೆರವೇರಿಸಿ ವಿಶೇಷ ಪೂಜೆ, ಹೋಮ, ಹವನ, ರುದ್ರಾಭಿಷೇಕ ಹಾಗೂ ರುದ್ರಪಾರಾಯಣ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಪವಿತ್ರ ಪ್ರಯಾಗ್‌ರಾಜ್‌ ನ ತ್ರಿವೇಣಿ ಸಂಗಮದ ಪವಿತ್ರ ಜಲ ಪ್ರೋಕ್ಷಣೆಯ ಮೂಲಕ ಭಕ್ತಾದಿಗಳಿಗೆ ವಿಶೇಷವಾದ ಅನುಭೂತಿಯನ್ನು ನೀಡುವುದು ನಮ್ಮ ಉದ್ದೇಶವಾಗಿತ್ತು. ಈ ಹಿನ್ನಲೆಯಲ್ಲಿ ತ್ರಿವೇಣಿ ಸಂಗಮದಿಂದ ತಂದ ನೀರನ್ನು ಬಂದ ಭಕ್ತಾದಿಗಳ ಮೇಲೆ ಪ್ರೋಕ್ಷಣೆ ಮಾಡಲಾಯಿತು. 

24 ಗಂಟೆಗಳ ಕಾಲವೂ ನಿರಂತರವಾಗಿ ಸಿರಿಧಾನ್ಯದಿಂದ ತಯಾರಿಸಿದ ಸಾತ್ವಿಕ ಪ್ರಸಾದವನ್ನು ವಿತರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಸಾವಿರಾರು ಭಕ್ತರು ಈ ಉತ್ಸವದಲ್ಲಿ ಪಾಲ್ಗೊಂಡಿದ್ದು ಸಂತಸ ತಂದಿದೆ ಎಂದು ಟ್ರಸ್ಟ್‌ನ ಬೆಳ್ಳಿಪಾಡಿ ಗುಣರಂಜನ್‌ ಶೆಟ್ಟಿ ತಿಳಿಸಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.