Rain Effect Warning: ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋದ ಬೈಕ್ ಸವಾರ! 

ಮಂಡ್ಯ: ರಸ್ತೆಯ ಮೇಲೆ ಹರಿಯುತ್ತಿದ್ದ ಕೆರೆ ನೀರನ್ನು ಲೆಕ್ಕಿಸದೇ ಬೈಕ್ ಚಲಾಯಿಸಿಕೊಂಡು ಹೋದ ಸವಾರ ಕೊಚ್ಚಿಹೋದ ಘಟನೆ ನಾಗಮಂಗಲ ತಾಲ್ಲೂಕಿನ ಆಣೇಚೆನ್ನಾಪುರ ಗ್ರಾಮದಲ್ಲಿ ನಡೆದಿದೆ. ಕಂಬದಹಳ್ಳಿ ಗ್ರಾಮದ ಮಾಯಣ್ಣ ಗೌಡ(67) ಮೃತ ಬೈಕ್ ಸವಾರನಾಗಿದ್ದಾನೆ.…

ಮಂಡ್ಯ: ರಸ್ತೆಯ ಮೇಲೆ ಹರಿಯುತ್ತಿದ್ದ ಕೆರೆ ನೀರನ್ನು ಲೆಕ್ಕಿಸದೇ ಬೈಕ್ ಚಲಾಯಿಸಿಕೊಂಡು ಹೋದ ಸವಾರ ಕೊಚ್ಚಿಹೋದ ಘಟನೆ ನಾಗಮಂಗಲ ತಾಲ್ಲೂಕಿನ ಆಣೇಚೆನ್ನಾಪುರ ಗ್ರಾಮದಲ್ಲಿ ನಡೆದಿದೆ. ಕಂಬದಹಳ್ಳಿ ಗ್ರಾಮದ ಮಾಯಣ್ಣ ಗೌಡ(67) ಮೃತ ಬೈಕ್ ಸವಾರನಾಗಿದ್ದಾನೆ.

ಸತತ ಮಳೆಯಿಂದಾಗಿ ಬುಧವಾರ ಆಣೆಚೆನ್ನಾಪುರ ಗ್ರಾಮದ ಬಳಿ ಕೆರೆಯ ಕೋಡಿ ಬಿದ್ದು ನೀರು ರಸ್ತೆ ಮೇಲೆ ರಭಸವಾಗಿ ಹರಿಯುತ್ತಿತ್ತು. ಸಂಜೆ ವೇಳೆ ಗ್ರಾಮಕ್ಕೆ ತೆರಳಲು ಮುಂದಾದ ಮಾಯಣ್ಣ ರಸ್ತೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರು ಲೆಕ್ಕಿಸದೇ ಬೈಕ್ ನಲ್ಲಿ ತೆರಳಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಬೈಕ್ ಸಮೇತ ಕೊಚ್ಚಿ ಹೋಗಿ ಕಣ್ಮರೆಯಾಗಿದ್ದರು.

ಘಟನೆ ಬಳಿಕ ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ಹುಡುಕಾಟ ನಡೆಸಿದ್ದು ಮಾಯಣ್ಣ ಅವರ ಮೃತದೇಹ ಮತ್ತು ಬೈಕ್ ರಸ್ತೆಯಿಂದ ಸ್ವಲ್ಪ ದೂರದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.