ಇಂದು ಪುನೀತ್ ರಾಜ್ಕುಮಾರ್ ಜನ್ಮದಿನದ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಅವರ ಪುಣ್ಯಭೂಮಿಗೆ ಆಗಮಿಸಿ, ಶ್ರೀಮುರಳಿ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಅಪ್ಪು ಮಾವನ ಹುಟ್ಟುಹಬ್ಬ, ನೋಡಿಕೊಂಡು ಹೋಗೋಣ ಅಂತ ಬಂದಿದ್ದೇವೆ.
ಮಾಮ ಎಲ್ಲೇ ಇದ್ದರೂ ನಗು ನಗುತ್ತಾ ಚೆನ್ನಾಗಿರಲಿ, ಅವರನ್ನ ಯಾವಾಗಲೂ ಮಿಸ್ ಮಾಡಿಕೊಳ್ಳುತ್ತೇವೆ. ಎಲ್ಲೋ ಒಂದು ಕಡೆ ನಮ್ಮ ಜೊತೆನೇ ಇದ್ದಾರೆ ಅನ್ನೋ ನಂಬಿಕೆಯಿದೆ.
ಅಭಿಮಾನಿಗಳ ಪ್ರೀತಿಗೆ ನಾವು ಚಿರಋಣಿ. ಅವರಿಂದಲೇ ನಾವು, ಅವರೇ ನಮ್ಮ ಮೊದಲ ಆದ್ಯತೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.