ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿತ!

ಶಿರಸಿ: ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿದು ಹತ್ಯೆಗೈದಿರುವ ಆತಂಕಕಾಗಿ ಘಟನೆ ನಗರದಲ್ಲಿ ನಡೆದಿದೆ. ಗಂಗಾಧರ ಕೊಲೆಯಾದ ದುರ್ದೈವಿಯಾಗಿದ್ದಾನೆ. ಗಂಗಾಧರ ಪತ್ನಿಯೊಂದಿಗೆ ಬಸ್‌ನಲ್ಲಿ ಬೆಂಗಳೂರಿಗೆಂದು ಹೊರಟಿದ್ದು, ಇದೇ ಬಸ್‌ನಲ್ಲಿ ಕೊಲೆಗೈದ ಆರೋಪಿಯೂ ಪ್ರಯಾಣಿಸುತ್ತಿದ್ದ. ಬಸ್ಸು…

ಶಿರಸಿ: ಬಸ್‌ನಲ್ಲಿ ತೆರಳುತ್ತಿದ್ದ ಪ್ರಯಾಣಿಕನಿಗೆ ಚಾಕು ಇರಿದು ಹತ್ಯೆಗೈದಿರುವ ಆತಂಕಕಾಗಿ ಘಟನೆ ನಗರದಲ್ಲಿ ನಡೆದಿದೆ. ಗಂಗಾಧರ ಕೊಲೆಯಾದ ದುರ್ದೈವಿಯಾಗಿದ್ದಾನೆ.

ಗಂಗಾಧರ ಪತ್ನಿಯೊಂದಿಗೆ ಬಸ್‌ನಲ್ಲಿ ಬೆಂಗಳೂರಿಗೆಂದು ಹೊರಟಿದ್ದು, ಇದೇ ಬಸ್‌ನಲ್ಲಿ ಕೊಲೆಗೈದ ಆರೋಪಿಯೂ ಪ್ರಯಾಣಿಸುತ್ತಿದ್ದ. ಬಸ್ಸು ಹೊಸ ಬಸ್ ನಿಲ್ದಾಣದಿಂದ ಹಳೆ ಬಸ್ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವೇಳೆ, ಬಸ್ ನಲ್ಲಿಯೇ ಗಂಗಾಧರನೊಂದಿಗೆ ಜಗಳ ತೆಗೆದ ವ್ಯಕ್ತಿ ಏಕಾಏಕಿ ಎದೆಗೆ ಚಾಕುವನ್ನು ಇರಿದಿದ್ದಾನೆ. 

ಬಸ್ಸು ಪಂಡಿತ ಸಾರ್ವಜನಿಕ ಆಸ್ಪತ್ರೆ ಬಳಿ ತಲುಪಿದಾಗಲೇ ಈ ಕೃತ್ಯ ಎಸಗಿದ್ದು, ಪ್ರಯಾಣಿಕ ಗಂಗಾಧರ್ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಶಹರ ಠಾಣೆಯ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಕೃತ್ಯಕ್ಕೆ ಕಾರಣ ಏನೆಂಬುದು ತಿಳಿದಿಲ್ಲವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.