ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾದ ಧಾರುಣ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ.
ಪ್ರಜ್ವಲ್ ದೇವರಮನಿ(14) ಹಾಗೂ ಸನತ್ ರೆಡ್ಡಿ(14) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇಬ್ಬರೂ ಬಾಲಕರು ಬೆಳಿಗ್ಗೆ ಕೆರೆಗೆ ಈಜಲು ತೆರಳಿದ್ದು, ಈ ವೇಳೆ ಈಜಲು ಸಾಧ್ಯವಾಗದೇ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ಸದ್ಯ ಬಾಲಕ ಪ್ರಜ್ವಲ್ ಮೃತದೇಹ ಮಾತ್ರ ಕೆರೆಯಲ್ಲಿ ಪತ್ತೆಯಾಗಿದ್ದು, ಇನ್ನೋರ್ವ ಬಾಲಕ ಸನತ್ಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.
ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ದೌಡಾಯಿಸಿದ್ದು, ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.