ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡುವ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಕರೆದಿದ್ದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಸುಮಲತಾ ಈ ನಿರ್ಧಾರ ಪ್ರಕಟಿಸಿದ್ದಾರೆ
ಅಭಿವೃದ್ಧಿ ಮತ್ತು ಮೋದಿ ನಾಯಕತ್ವದ ಬಗ್ಗೆ ನಂಬಿಕೆ ಇಟ್ಟುಕೊಂಡು ಈ ನಿರ್ಧಾರ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ಇವರಿಗೆ ಬಿಜೆಪಿ ಅಭ್ಯರ್ಥಿ ಹಾಕದೆ ಬೆಂಬಲ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಇನ್ನು, ನಿನ್ನೆರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಪಕ್ಷ ಸೇರ್ಪಡೆ ಕುರಿತಂತೆ ಸುಮಲತಾ ಅಂಬರೀಶ್ ಮಾತುಕತೆ ನಡೆಸಿದ್ದರು. ಮಂಡ್ಯ, ಶ್ರೀರಂಗಪಟ್ಟಣ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಸುದ್ದಿಗೋಷ್ಠಿಯಲ್ಲಿ ಸುಮಲತಾ ಭಾವುಕರಾದರು, ಹಿಂದೆ ಚುನಾವಣೆ ವೇಳೆ ಅವರ ಮೇಲೆ ಹೊರಿಸಲಾಗಿದ್ದ ಆರೋಪಗಳ ನೆನೆದು ಕಣ್ಣೀರಿಟ್ಟರು.