ರಾಜ್ಯದಲ್ಲಿರುವ 1.10 ಕೋಟಿ BPL ಕಾರ್ಡುದಾರರ ಪೈಕಿ 20 ಲಕ್ಷ ಅನರ್ಹರಿದ್ದಾರೆ ಎಂದು ಸಚಿವ KH ಮುನಿಯಪ್ಪ ಹೇಳಿದ್ದಾರೆ.
ಸದನದಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ 3 ವರ್ಷವಾದರೂ ಪಡಿತರ ಚೀಟಿ ಪರಿಷ್ಕರಣೆ ಕಾರ್ಯಕ್ಕೆ ಮುಂದಾಗಿರಲಿಲ್ಲ.
ನಮ್ಮ ಸರ್ಕಾರ ಬಂದ ಮೇಲೆ ಈ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಪರಿಷ್ಕರಣಾ ಪಟ್ಟಿಯಿಂದ ಅನರ್ಹರನ್ನು ಕೈಬಿಟ್ಟರೆ ಅರ್ಹರಿಗೆ BPL ಕಾರ್ಡು ನೀಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.