ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 4 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಬಜೆಟ್ ಅಧಿವೇಶನದ ಸಿದ್ಧತೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಈ ಸಭೆ ನಡೆಯಲಿದೆ.
ಮಾರ್ಚ್ 3ರಿಂದ ವಿಧಾನಸಭೆಯ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26 ನೇ ಸಾಲಿನ ರಾಜ್ಯ ಬಜೆಟ್ಗೆ ಸಿದ್ಧತೆಗಳನ್ನು ಆರಂಭಿಸಿದ್ದು, ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆಗಳನ್ನು ನಡೆಸಿದ್ದಾರೆ.
ತಮ್ಮ ದಾಖಲೆಯ 16ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಹೆಚ್ಚಿನ ನಿರೀಕ್ಷೆಗಳಿವೆ.