8 ಕಾಂಗ್ರೆಸ್ ನಾಯಕರು ಸಿಎಂ ಆಗಲು ಕಾಯುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

ಮೈಸೂರು: ಕನಿಷ್ಠ ಎಂಟು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗಲು ಕಾಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗುವುದಿಲ್ಲ. ಅವರು ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು ಎಂದು…

ಮೈಸೂರು: ಕನಿಷ್ಠ ಎಂಟು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗಲು ಕಾಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗುವುದಿಲ್ಲ. ಅವರು ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಪಿತೂರಿಯಲ್ಲಿ ತೊಡಗಿದ್ದಾರೆ. ಮತ್ತು ತಮ್ಮ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತಮ್ಮ ಬೆಂಬಲಿಗರನ್ನು ಬಳಸುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

“ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವಲ್ಲಿ ಮತ್ತು ಮುಖ್ಯಮಂತ್ರಿಯಾಗುವ ಕನಸು ಕಾಣುವಲ್ಲಿ ತಮಗೆ ಪ್ರಮುಖ ಪಾತ್ರವಿದೆ ಎಂದು ಶಿವಕುಮಾರ ಹೇಳುತ್ತಾರೆ. ಆದರೆ, ಉಳಿದವರು, ಸಿದ್ಧರಾಮಯ್ಯ ರಾಜೀನಾಮೆ ನೀಡಿದರೂ, ಡಿಕೆಶಿ ಮುಖ್ಯಮಂತ್ರಿಯಾಗದೇ ಇರಲು, ಡಿನ್ನರ್ ಮೀಟಿಂಗ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಹಲವಾರು ಸಚಿವರು ಶಿವಕುಮಾರ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. 

Vijayaprabha Mobile App free

“ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಗೋ ಹತ್ಯೆ, ಬೀದರ್ನಲ್ಲಿ ಎಟಿಎಂ ಕಳ್ಳತನ ಮತ್ತು ಗುಲ್ಬರ್ಗಾದಲ್ಲಿ (ಕಲಬುರಗಿಯಲ್ಲಿ) ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯದಂತಹ ಘಟನೆಗಳು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂಬುದನ್ನು ಸೂಚಿಸುತ್ತವೆ. ಸರ್ಕಾರ ರಾಷ್ಟ್ರ ವಿರೋಧಿಗಳನ್ನು ಶಿಕ್ಷಿಸಲು ಏನನ್ನೂ ಮಾಡುತ್ತಿಲ್ಲ ಮತ್ತು ಅಲ್ಪಸಂಖ್ಯಾತರನ್ನು ಓಲೈಸುವಲ್ಲಿ ತೊಡಗಿದ್ದಾರೆ” ಎಂದು ಅವರು ಟೀಕಿಸಿದರು.

‘ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತೇನೆ’

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, “ನಾನು ಬಿಜೆಪಿಯನ್ನು ಕಟ್ಟುತ್ತೇನೆ ಮತ್ತು ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ. ಇದರರ್ಥ ನಾನು ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ಮುಂದುವರಿಯುತ್ತೇನೆ. ನಾನು ಒಂದು ವರ್ಷದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ ಮತ್ತು ಭವಿಷ್ಯದಲ್ಲೂ ನಾನು ಹೆಚ್ಚಿನ ಪ್ರಯತ್ನವನ್ನು ಮಾಡುತ್ತೇನೆ ಮತ್ತು ಕೆಲಸ ಮಾಡುತ್ತೇನೆ. 

ಬಿಜೆಪಿ ನಾಯಕರ ನಡುವಿನ ಎಲ್ಲಾ ಗೊಂದಲಗಳನ್ನು ನಿವಾರಿಸಲಾಗುವುದು. ಬಂಡಾಯ ಹೇಳಿಕೆಗಳು ಶೀಘ್ರದಲ್ಲೇ ನಿಲ್ಲುತ್ತವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಕಟ್ಟುತ್ತೇನೆ ಎಂದು ಹೇಳಿದರು.

 ಮಾಜಿ ಸಚಿವ ರಮೇಶ್ ಜಾರ್ಕಿಹೊಳಿ ಹಾಗೂ ಇತರರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾತನಾಡುವಾಗ ಎಚ್ಚರ ವಹಿಸಬೇಕು. ಯಾಕೆಂದರೆ ಅದು ಪಕ್ಷದ ಕಾರ್ಯಕರ್ತರಿಗೆ ನೋವುಂಟಾಗುತ್ತದೆ. ಯಡಿಯೂರಪ್ಪ ಅವರು ಪಕ್ಷವನ್ನು ತಳಮಟ್ಟದಿಂದ-ಗ್ರಾಮ ಮಟ್ಟದಿಂದಲೇ ಕಟ್ಟಿಕೊಟ್ಟಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.