ಹರಿಯಾಣ ಮಾಜಿ ಸಿಎಂ Om Prakash Chautala ಇನ್ನಿಲ್ಲ

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ(89) ಅವರು ಶುಕ್ರವಾರ ಗುರುಗ್ರಾಮದಲ್ಲಿ ಹೃದಯಾಘಾತದಿಂದ ನಿಧನರಾದರು. ಪಕ್ಷದ ವಕ್ತಾರರು ಈ ಮಾಹಿತಿ ನೀಡಿದ್ದು, ವಯೋಸಹಜ ಸಮಸ್ಯೆಯಿಂದ ಓಂ…

ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ(89) ಅವರು ಶುಕ್ರವಾರ ಗುರುಗ್ರಾಮದಲ್ಲಿ ಹೃದಯಾಘಾತದಿಂದ ನಿಧನರಾದರು.

ಪಕ್ಷದ ವಕ್ತಾರರು ಈ ಮಾಹಿತಿ ನೀಡಿದ್ದು, ವಯೋಸಹಜ ಸಮಸ್ಯೆಯಿಂದ ಓಂ ಪ್ರಕಾಶ್ ಚೌಟಾಲಾ ಅವರು ಬಳಲುತ್ತಿದ್ದರು. ಶುಕ್ರವಾರ ಗುರುಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಚೌಟಾಲಾ ಅವರು ಡಿಸೆಂಬರ್ 1989 ರಿಂದ ಪ್ರಾರಂಭವಾಗಿ ದಾಖಲೆಯ ನಾಲ್ಕು ಅವಧಿಗೆ ಹರಿಯಾಣದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು ಕೊನೆಯ ಬಾರಿ ಅಂದರೆ 1999 ರಿಂದ 2005 ರವರೆಗೆ ಮುಖ್ಯಮಂತ್ರಿಯಾಗಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ನಡೆದಿದ್ದ ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಚೌಟಾಲಾ ಅವರು ಬಹಿರಂಗವಾಗಿ ಕಾಣಿಸಿಕೊಂಡಿದ್ದರು. ಭಾರತದ ಮಾಜಿ‌ ಉಪ ಪ್ರಧಾನಿ ಚೌಧರಿ ದೇವಿಲಾಲ್ ಅವರ ಪುತ್ರ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.