KPCC ಅಧ್ಯಕ್ಷ ಸ್ಥಾನದಿಂದ ಶೀಘ್ರವೇ ಮುಕ್ತನಾಗುತ್ತೇನೆ: ಡಿ.ಕೆ.ಶಿವಕುಮಾರ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಡಿ.ಕೆ.ಶಿವಕುಮಾರ್ ಶೀಘ್ರವೇ ಮುಕ್ತವಾಗುತ್ತೇನೆ ಎಂಬ ಹೇಳಿಕೆ ಕಾಂಗ್ರೆಸ್ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.  ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಸೆಲ್ ವಿಭಾಗಗಳೊಂದಿಗೆ…

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಡಿ.ಕೆ.ಶಿವಕುಮಾರ್ ಶೀಘ್ರವೇ ಮುಕ್ತವಾಗುತ್ತೇನೆ ಎಂಬ ಹೇಳಿಕೆ ಕಾಂಗ್ರೆಸ್ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 

ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಸೆಲ್ ವಿಭಾಗಗಳೊಂದಿಗೆ ಡಿ.ಕೆ.ಶಿವಕುಮಾರ್ ಸಭೆ ನಡೆಸಿ ಪಕ್ಷದ ಬಲವರ್ಧನೆ ಮತ್ತು ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು.  ಈ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಯಾರು ಬೇಕಾದರೂ ಕೆಪಿಸಿಸಿ ಜವಾಬ್ದಾರಿಯನ್ನು ತೆಗೆದುಕೊಳ್ಳಬಹುದು ಎಂದು ಹೇಳುವ ಮೂಲಕ ಅಧಿಕಾರ ಹಂಚಿಕೆಯ ಆಟವನ್ನು ಪ್ರಾರಂಭಿಸಿದ್ದಾರೆ.

ಸಭೆಯಲ್ಲಿ ಕೆ.ಪಿ.ಸಿ.ಸಿ ಪದಾಧಿಕಾರಿಗಳೊಬ್ಬರು ಜಿಲ್ಲಾ ಮಟ್ಟದಲ್ಲಿ ಎರಡು ಹುದ್ದೆಗಳನ್ನು ಪ್ರಸ್ತಾಪಿಸಿದರು. ಆ ಸಮಯದಲ್ಲಿ ಅಲ್ಲಿದ್ದ ಡಿ.ಕೆ.ಶಿವಕುಮಾರ ತಕ್ಷಣವೇ, “ನೋಡ್ರಪ್ಪ, ಸಮಯ ಮತ್ತು ಸಂದರ್ಭಕ್ಕೆ ಅನುಗುಣವಾಗಿ ಪಕ್ಷದಲ್ಲಿ ಅದು ನಡೆಯಲಿದೆ. ಖರ್ಗೆ ಸಾಹೇಬ್ರು ಎಐಸಿಸಿ ಅಧ್ಯಕ್ಷರಾಗಿದ್ದಾರೆ ಮತ್ತು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಕೆ.ಪಿ.ಸಿ.ಸಿ ಅಧ್ಯಕ್ಷ ಮತ್ತು ಡಿಸಿಎಂ ಆಗಿ ಎರಡು ಖಾತೆಗಳನ್ನು ಸಹ ನಿರ್ವಹಿಸುತ್ತಿದ್ದೇನೆ” ಎಂದು ಹೇಳಿದರು. ಮುಂದುವರಿದ ಅವರು, 100 ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆಯ ನಂತರ, ನಾನು ಮುಕ್ತನಾಗುತ್ತೇನೆ,  ಕೆ.ಪಿ.ಸಿ.ಸಿ. ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನು ಬೇರೆಯವರು ವಹಿಸಿಕೊಳ್ಳಲಿ ಎಂದರು.

Vijayaprabha Mobile App free

ಕಾಂಗ್ರೆಸ್ ನಿಯಮಗಳ ಪ್ರಕಾರ, ಒಬ್ಬ ವ್ಯಕ್ತಿಗೆ ಕೇವಲ ಒಂದು ಹುದ್ದೆ ಸಿಗಬೇಕು.  ಪ್ರಸ್ತುತ, ಡಿಸಿಎಂ ಜೊತೆಗೆ ಡಿ.ಕೆ.ಶಿವಕುಮಾರ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಹಿಂದೆ, ಅವರು ಅಧ್ಯಕ್ಷ ಮತ್ತು ಡಿಸಿಎಂ ಎರಡೂ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪಕ್ಷದೊಳಗೆ ಕೋಲಾಹಲ ಉಂಟಾಗಿತ್ತು. ಈಗ, ಡಿ.ಕೆ.ಶಿವಕುಮಾರ ಅವರು ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಹೊಂದಲಿದ್ದಾರೆ ಎಂದು ಹೇಳುವ ಮೂಲಕ ಪಕ್ಷದಲ್ಲಿ ಕೋಲಾಹಲ ಸೃಷ್ಟಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply