Ration card amendment: ಈ ಜಿಲ್ಲೆಗಳಿಗೆ ರೇಷನ್‌ ಕಾರ್ಡ್ ತಿದ್ದುಪಡಿಗೆ ಅವಕಾಶ!

Vijayaprabha

Ration card amendment: ರಾಜ್ಯ ಆಹಾರ & ನಾಗರಿಕ ಪೂರೈಕೆ ಸಚಿವಾಲಯವು ರಾಜ್ಯ ಸರ್ಕಾರದ ಕೆಲ ಯೋಜನೆಗಳಿಗೆ ರೇಷನ್‌ ಕಾರ್ಡ್ ಅಗತ್ಯವನ್ನರಿತು ತಿದ್ದುಪಡಿಗೆ ದಿನಾಂಕ ವಿಸ್ತರಿಸಿ ಮತ್ತೆ ಕಾಳಾವಕಾಶ ನೀಡಿತ್ತು. ಮೊದಲ ಹಂತದಲ್ಲಿ ಬೆಂಗಳೂರು ಎರಡನೇ & ಮೂರನೇ ಹಂತದಲ್ಲಿ ಉಳಿದ ಜಿಲ್ಲೆಯವರು ತಿದ್ದುಪಡಿ ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ: ರೈತರಿಗೆ ಬಿಗ್ ಶಾಕ್, ಪಿಎಂ ಕಿಸಾನ್‌ನಿಂದ 1.72 ಕೋಟಿ ರೈತರ ಹೆಸರು ಡಿಲೀಟ್; ನೀವು ಪಟ್ಟಿಯಲ್ಲಿದ್ದಾರಾ?

ರಾಜ್ಯ ಸರ್ಕಾರದ ಕೆಲವೊಂದು ಯೋಜನೆಗಳಿಗೆ ರೇಷನ್‌ ಕಾರ್ಡ್ ಅಗತ್ಯವಾಗಿದ್ದರಿಂದ ಸರಕಾರ ತಿದ್ದುಪಡಿಗೆ ಈಗಾಗಲೇ ಕಾಲಾವಕಾಶ ನೀಡಿತ್ತು. ಆದರೆ ಸರ್ವರ್‌ ಸಮಸ್ಯೆಯಿಂದ ಅನೇಕರಿಗೆ ಪಡಿತರ ಚೀಟಿ ತಿದ್ದುಪಡಿ ಆಗದ ಕಾರಣ ಇದೀಗ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿದೆ.

Ration card amendment: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ಜಿಲ್ಲೆಗಳಿಗೆ BPL ಕಾರ್ಡ್‌ ತಿದ್ದುಪಡಿಗೆ ಅವಕಾಶ!

ಹೌದು ಅಕ್ಟೋಬರ್ 13 ರವರೆಗೆ ಹೊಸ ಸದಸ್ಯರ ಸೇರ್ಪಡೆ, ಹೆಸರು & ಇತರೆ ಮಾಹಿತಿ ತಿದ್ದುಪಡಿ, ಕುಟುಂಬ ಮುಖ್ಯಸ್ಥರ ಬದಲಾವಣೆಗೆ ಅವಕಾಶ ಕಲ್ಪಿಸಿದ್ದು, ಈ ತಿದ್ದುಪಡಿಯನ್ನು ನಿಮ್ಮ ಹತ್ತಿರದ ಗ್ರಾಮ್‌ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಕೇಂದ್ರಗಳಿಗೆ ಹೋಗಿ ಮಾಡಿಸಬಹುದು. ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಭೇಟಿ ನೀಡಿ ತಿದ್ದುಪಡಿ ಮಾಡಿಸಬಹುದು.

Ration card amendment: 15 ಜಿಲ್ಲೆಗಳಿಗೆ BPL ಕಾರ್ಡ್‌ ತಿದ್ದುಪಡಿಗೆ ಅವಕಾಶ!

ಮೊದಲ ಹಂತದಲ್ಲಿ ಬೆಂಗಳೂರು ನಗರ & ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿತ್ತು. ಈಗ ರಾಜ್ಯದ 15 ಜಿಲ್ಲೆಗಳಲ್ಲಿ ಅ.8ರಿಂದ 10ರವರೆಗೆ 2ನೇ ಹಂತದ BPL ಕಾರ್ಡ್‌ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಇಂದು ಬೆಳಿಗ್ಗೆಯಿಂದಲೇ ಕಾರ್ಡ್‌ ತಿದ್ದುಪಡಿ ಪ್ರಾರಂಭವಾಗಿದೆ.

ಇದನ್ನೂ ಓದಿ: ಇಂದು ಮೇಷ, ಕರ್ಕಾಟಕ ಸೇರಿದಂತೆ ಈ ರಾಶಿಯವರಿಗೆ ಶಿವನ ಕೃಪೆ..!

ಹೌದು, ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ & ಹಾವೇರಿ ಜಿಲ್ಲೆಗಳಿಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದೆ.

ರಾಜ್ಯದ ಜನತೆಗೆ GOOD NEWS

ಇನ್ನು, ರಾಜ್ಯದ ಜನರಿಗೆ ಆಹಾರ ಇಲಾಖೆ ಶುಭ ಸುದ್ದಿ ನೀಡಿದ್ದು, BPL ಪಡಿತರ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ ಈ ತಿಂಗಳ ಒಳಗೆ ಕಾರ್ಡ್‌ ವಿತರಿಸಲು ಸಿದ್ಧತೆ ನಡೆಸುತ್ತಿದೆ. ಸುಮಾರು 2.95 ಲಕ್ಷ ಮಂದಿಗೆ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ್ದು, ಪರಿಶೀಲನೆ ಕಾರ್ಯ ಮುಗಿದ ಬಳಿಕ ಅರ್ಹರಿಗೆ ಕಾರ್ಡ್‌ ನೀಡಲು ಇಲಾಖೆ ನಿರ್ಧರಿಸಿದೆ. ಈ ನಡುವೆ BPL ಕಾರ್ಡ್‌ ತಿದ್ದುಪಡಿಗೂ ಅವಕಾಶ ನೀಡಲಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ವಿವಿಧ ದಿನಾಂಕದಂದು (ಅ.11-13ರ ವರೆಗೆ) ಬದಲಾವಣೆಗೆ ಅವಕಾಶವಿದೆ.

ಇದನ್ನೂ ಓದಿ:ಉದ್ಯೋಗ ಆಧಾರ್ ಎಂದರೇನು? ಇದು ಏನೆಲ್ಲಾ ಪ್ರಯೋಜನಗಳನ್ನು ಹೊಂದಿದೆ? ಸಂಪೂರ್ಣ ವಿವರ ತಿಳಿಯಿರಿ

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version