ಯಶಸ್ವಿನಿ ಯೋಜನೆ ನೋಂದಣಿ: ಮತ್ತೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

Vijayaprabha

ರಾಜ್ಯದ ಅತ್ಯಂತ ಪ್ರಮುಖ ಆರೋಗ್ಯ ಯೋಜನೆಗಳಲ್ಲಿ ಒಂದಾದ ಯಶಸ್ವಿನಿ ಯೋಜನೆಗೆ ನೋಂದಣಿಗೆ ಕೊನೆಯ ದಿನಾಂಕವನ್ನು ಮಾರ್ಚ್‌ 31ರವರೆಗೆ ವಿಸ್ತರಿಸಲಾಗಿದೆ. 2022–23ನೇ ಸಾಲಿನಿಂದ ಈ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಮೂರನೇ ಬಾರಿ ನೋಂದಣಿ ಅವಧಿಯನ್ನು ವಿಸ್ತರಿಸಲಾಗಿದೆ.

ಹೌದು, ಹಲವರ ಮನವಿ ಹಿನ್ನೆಲೆ, ಈ ಹಿಂದೆ ಫೆ.28 ರವರೆಗೆ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿ ವಿಸ್ತರಿಸಲಾಗಿತ್ತು. ಇದೀಗ ಮಾರ್ಚ್ 31ರವರೆಗೆ ಮತ್ತೊಮ್ಮೆ ವಿಸ್ತರಿಸಲಾಗಿದೆ. ಈ ಯೋಜನೆಯಡಿ ಪ್ರಸಕ್ತ ಸಾಲಿಗೆ 30 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ.

ಇನ್ನು, ಯಶಸ್ವಿನಿ ಯೋಜನೆಯಡಿ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ಉಚಿತ ಚಿಕಿತ್ಸೆ ಪಡೆಯಬಹುದಾಗಿದ್ದು, ಸರ್ಕಾರವು ಇದಕ್ಕಾಗಿ ಬಜೆಟ್ ನಲ್ಲಿ 300 ಕೋಟಿ ಅನುದಾನ ನೀಡಿದೆ.

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version