ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

Vijayaprabha

ಪ್ರಸಕ್ತ (2022-23) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ’ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಕಾಲಾವಕಾಶ ನೀಡಲಾಗಿದ್ದು, ಇಂದೇ ಕೊನೆಯ ದಿನವಾಗಿದೆ.

ಇದನ್ನು ಓದಿ: ಅನ್ನದಾತರೇ: ಈ ರೀತಿ ಮಾಡಿದ್ರೆ ನಿಮ್ಮ ಖಾತೆ ಸೇರುತ್ತೆ ಬರೋಬ್ಬರಿ 42 ಸಾವಿರ; ಸರ್ಕಾರದ ಈ ಹಣವನ್ನು ನಿಮ್ಮದಾಗಿಸಿಕೊಳ್ಳಿ!

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ವಿಳಾಸ: https: //ssp. postmatric. karnataka. gov. in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https: //bcwd. karnataka. gov. in ನ್ನು ನೋಡಬಹುದು. ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka. gov. in, ದೂರವಾಣಿ ಸಂಖ್ಯೆ: 080-35254757 ನ್ನು ಸಂಪರ್ಕಿಸಬಹುದು.

ಇದನ್ನು ಓದಿ: ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದೆಯಾ? ಆಧಾರ್ ಸಂಖ್ಯೆ ಕೂಡ ಗೊತ್ತಿಲ್ವಾ? ಆದರೂ ಡೌನ್‌ಲೋಡ್ ಮಾಡಿಕೊಳ್ಳಿ!

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version