ಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?

Vijayaprabha

Swami Vivekananda Yuva Shakti Yojana: ಯುವಕರನ್ನು ಒಗ್ಗೂಡಿಸಿ, ಉತ್ಪಾದನಾ ಚಟುವಟಿಕೆಯಲ್ಲಿ ತೊಡಗಿಸಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಗೆ (Swami Vivekananda Yuva Shakti Yojana) ಸಿಎಂ ಬಸವರಾಜ್ ಬೊಮ್ಮಾಯಿ ಇದೆ ಮಾರ್ಚ್ 23ಕ್ಕೆ ಚಾಲನೆ ನೀಡಲಿದ್ದಾರೆ.

ಇದನ್ನು ಓದಿ: ಸರ್ಕಾರದ ಅದ್ಬುತ ಯೋಜನೆ: ತಿಂಗಳಿಗೆ 200 ರೂ ಕಟ್ಟಿದರೆ ಸಾಕು, ಪ್ರತಿ ತಿಂಗಳು 5 ಸಾವಿರ ರೂ, ಒಂದೇ ಬಾರಿಗೆ 8.5 ಲಕ್ಷ ರೂ.!

ಇದನ್ನು ಓದಿ: ಖ್ಯಾತ ನಟಿಗೆ ಈ ಹೆಸರೇ ಸಮಸ್ಯೆ; ವಿಚ್ಛೇದನ ಬಳಿಕ ಎದುರಾದ ಸಮಸ್ಯೆ ಬಿಚ್ಚಿಟ್ಟ ಮಲೈಕಾ ಆರೋರ

ರಾಜ್ಯದಲ್ಲಿ ಯುವಕರಿಗೆ ಮೊದಲ ಬಾರಿಗೆ ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಜಾರಿಗೆ ತಂದ ಯೋಜನೆಯೇ ಈ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ. ಕಳೆದ ವರ್ಷ ಆಗಸ್ಟ್‌ ತಿಂಗಳಲ್ಲಿ ರಾಜ್ಯ ಸರ್ಕಾರವು ‘ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ’ಯನ್ನು (Swami Vivekananda Yuva Shakti Yojana) ರೂಪಿಸಿ ರಾಜ್ಯ ಸರ್ಜಾರ ಅಧಿಸೂಚನೆ ಹೊರಡಿಸಿತ್ತು.

ಈ ಯೋಜನೆಯ ಅನುಷ್ಠಾನಕ್ಕೆ 500 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಕಳೆದ ವರ್ಷದ ಬಜೆಟ್‌ನಲ್ಲಿ ಘೋಷಿಸಿದ್ದು, ಈ ಪೈಕಿ ಮೊದಲ ಕಂತಿನಲ್ಲಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಇನ್ಮುಂದೆ ಸಿಗಲಿದೆ ಎಟಿಎಂನಿಂದ ರೇಷನ್

ಸ್ವಾಮಿ ವಿವೇಕಾನಂದ ಸ್ವ ಸಹಾಯ ಸಂಘ ರಚಿಸುವಂಥವರು 18ರಿಂದ 29 ವರ್ಷ ವಯಸ್ಸಿನೊಳಗಿನ ಯುವಕರಾಗಿದ್ದು, ಒಂದು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪು ರಚಿಸುವುದಕ್ಕೆ ಕನಿಷ್ಠ 10 ಸದಸ್ಯರು ಇರಬೇಕು. ಗರಿಷ್ಠ 20 ಸದಸ್ಯರ ಸೇರ್ಪಡೆಗೆ ಅವಕಾಶ ಇದೆ.

ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: ನಿಮ್ಮ ಪ್ಯಾನ್ ಕಾರ್ಡ್ಅನ್ನು ಆಧಾರ್‌ ಜೊತೆ ತಕ್ಷಣವೇ ಲಿಂಕ್ ಮಾಡಿ; ಆನ್‌ಲೈನ್‌ನಲ್ಲಿ ಲಿಂಕ್ ಮಾಡುವುದು ಹೇಗೆ..?

ಯುವಕರು ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಕೈಗೊಳ್ಳಲು, ಸರ್ಕಾರದ ವತಿಯಿಂದ ಕೌಶಲಾಭಿವೃದ್ಧಿ, ಉದ್ಯಮಶೀಲತೆಗೆ ತರಬೇತಿ ಮತ್ತು ಬ್ಯಾಂಕ್ ಸಾಲ ಪಡೆಯಲು ನಿರುದ್ಯೋಗ ಯುವಕರಿಗೆ ಪ್ರೋತ್ಸಾಹ

ಗ್ರಾಮೀಣ ನಿರುದ್ಯೋಗಿ ಯುವಜನರಿಗೆ ಉದ್ಯೋಗಾವಕಾಶ ಒದಗಿಸುವುದು ಮತ್ತು ಅದೇ ರೀತಿ ಅವರು ವಾಸಿಸುವ ಸ್ಥಳಗಳಲ್ಲಿ ಸ್ವಯಂ ಉದ್ಯೋಗ ಅವಕಾಶ ನೀಡುವುದು

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!

ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: SMS ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version