ದಾವಣಗೆರೆ ಸೆ.13:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಇಂದು ಜಿಲ್ಲೆಯಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಮುದಾಯ ಆರೋಗ್ಯ ಅಧಿಕಾರಿಗಳಿಗೆ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಕುರಿತು ಎರಡು ದಿನಗಳ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ತರಬೇತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ನಾಗರಾಜ ಮಾತನಾಡಿ ಸಮುದಾಯದಲ್ಲಿ ಎಲ್ಲಾ ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮದಲ್ಲಿ ಬರುವಂತಹ ಸೌಲಭ್ಯಗಳು ದೊರೆಯಬೇಕು ಹಾಗೂ ಸಮುದಾಯಕ್ಕೆ ಮನಮುಟ್ಟುವಂತೆ ತಿಳಿಸಿ ಅಸಾಂಕ್ರಾಮಿಕ & ಸಾಂಕ್ರಾಮಿಕ ರೋಗಗಳಿಂದ ಮುಕ್ತಾರನ್ನಾಗಿ ಮಾಡಿ ಆರೋಗ್ಯವೇ ಭಾಗ್ಯ ಎಂಬ ವೇದ ವ್ಯಾಖ್ಯಾದೊಂದಿಗೆ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಡಾ|| ಮೀನಾಕ್ಷೀ.ಕೆ.ಎಸ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಹಾಗೂ ಡಾ.ಸುರೇಶ್.ಎನ್.ಬಾರ್ಕಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಮತ್ತು ಟಿಓಟಿ ಆರೋಗ್ಯಾಧಿಕಾರಿಳಾದ ಡಾ.ಆಶಾಭಾನು ಪ್ರಕಾಶ್ ಮತ್ತು ಡಾ.ಮಹೇಶ್ರವರು ತರಬೇತಿಯನ್ನು ನೀಡುವುದರ ಮುಖಾಂತರ ಈ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.